ಭೂಮಿ ಕಳೆದುಕೊಂಡರೆ ಕೊಡವರ ಅಸ್ತಿತ್ವಕ್ಕೆ ದಕ್ಕೆ : ಡಾ.ಅನಿಲ್ ಚಂಗಪ್ಪ ಆತಂಕ

Monday, December 23rd, 2019
Puttari

ಮಡಿಕೇರಿ : ಕೊಡವರು ತಮ್ಮ ಆಸ್ತಿಯನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು, ಭೂಮಿಯನ್ನು ಕಳೆದುಕೊಳ್ಳುವುದರಿಂದ ಜನಾಂಗದ ಅಸ್ತಿತ್ವವೇ ಮರೆಯಾಗುವ ಸಾಧ್ಯತೆ ಇದೆ ಎಂದು ಖ್ಯಾತ ವೈದ್ಯ ಡಾ.ಅನಿಲ್ ಚಂಗಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಕೊಡವ ಸಮಾಜದ ವತಿಯಿಂದ ನಗರದ ಕೊಡವ ಸಮಾಜದಲ್ಲಿ ನಡೆದ ’ಪುತ್ತರಿ ಊರೊರ್ಮೆ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸಮಾಜ ಒಂದು ವಿಚಾರದ ಬಗ್ಗೆ ಧ್ವನಿ ಎತ್ತಿದರೆ ಅದಕ್ಕೆ ಮನ್ನಣೆ ಸಿಗುವಂತಾಗಬೇಕು ಎಂದು ಸಲಹೆ ನೀಡಿದ ಡಾ.ಅನಿಲ್ ಚಂಗಪ್ಪ, ಒಗ್ಗಟ್ಟನ್ನು ಕಾಯ್ದುಕೊಳ್ಳುವಂತೆ ಕಿವಿಮಾತು […]