ಉಕ್ಕಿ ಹರಿದ ಸ್ವರ್ಣ ನದಿ, ಉಡುಪಿಯ ಹಲವು ಪ್ರದೇಶಗಳು ಜಲಾವೃತ

Sunday, September 20th, 2020
Udupi Rain

ಉಡುಪಿ: ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸ್ವರ್ಣ ನದಿಯು ಉಕ್ಕಿ ಹರಿಯುತ್ತಿದ್ದು, ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿ ಹಾಗೂ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಶನಿವಾರ ಸಂಜೆ ಆರಂಭವಾದ ಮಳೆ ಬಿರುಸುಗೊಂಡಿತ್ತು. ರಾತ್ರಿ ಮೂರು ಘಂಟೆ ಸುಮಾರಿಗೆ ಸ್ವರ್ಣ ನದಿಯಲ್ಲಿ ಪ್ರವಾಹ ಅಧಿಕವಾಗಿದ್ದು, ಇಂದು ಬೆಳಿಗ್ಗೆಯೂ ಮುಂದುವರಿದ ಕಾರಣ ಅನಿರೀಕ್ಷಿತ ಪರಿಸ್ಥಿತಿ ಸಂಭವಿಸಿದೆ. ಉಪ್ಪೂರಿನ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ತಮ್ಮನ್ನು ರಕ್ಷಿಸಲು ದೋಣಿ ಕಳುಹಿಸುವಂತೆ ಕೇಳಿಕೊಂಡರೂ ಯಾರೂ ಬಂದಿಲ್ಲ ಮನೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. […]

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊವೀಡ್ -19 ಸೋಂಕು ದೃಢ

Tuesday, July 21st, 2020
Sugunendra Thirtha swamy

ಉಡುಪಿ :  ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಸೋಮವಾರ ರಾತ್ರಿ  ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ […]