ಮಕ್ಕಳಿಬ್ಬರಿಗೆ ವಿಷ ಕುಡಿಸಿದ ತಾಯಿ, 8 ವರ್ಷದ ಮಗಳು ಸಾವು

Sunday, September 20th, 2020
poision

ಪುತ್ತೂರು : ಮಕ್ಕಳಿಬ್ಬರಿಗೆ  ವಿಷ ಕುಡಿಸಿ  ಮಹಿಳೆಯೊಬ್ಬರು ಬಳಿಕ ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ಪುತ್ತೂರು ತಾಲೂಕಿನ ನಿಡ್ಪಳ್ಳಿ ಎಂಬಲ್ಲಿ ನಡೆದಿದ್ದು, 8 ವರ್ಷದ ಮಗಳು ಘಟನೆಯಲ್ಲಿ ಮೃತಪಟ್ಟಿದ್ದಾಳೆ. ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್‌ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ. ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿದ್ದ ದಿವ್ಯಶ್ರೀ, ಕೊರೋನ ಲಾಕ್‌ಡೌನ್ […]

ಅಂಗಡಿಯಿಂದ ಹಾಡಹಗಲೇ ಒಂದು ಲಕ್ಷ ರೂ. ಹಣ ಕದ್ದ ಆರೋಪಿಯ ಬಂಧನ

Wednesday, September 16th, 2020
safi

ಮಂಗಳೂರು : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ತಿಂಗಳಾಡಿ ಎಂಬಲ್ಲಿ ಅಂಗಡಿಯಿಂದ ಹಾಡಹಗಲೇ ಹಣ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು  ಬುಧವಾರ ಬಂಧಿಸಿದ್ದಾರೆ. ಆರೋಪಿ ಮಹಮ್ಮದ್ ಶಾಫಿ ( 28 ) ಯನ್ನು ಮನೆಯಿಂದ  ದಸ್ತಗಿರಿ ಮಾಡಿ ಕಳುವಾಗಿದ್ದ ಒಂದು ಲಕ್ಷ ರೂ. ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಬಂಧನಸೆ. 14 ರಂದು ಮಧ್ಯಾಹ್ನ ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿರುವ ಮಾತೃಶ್ರೀ ಕಾಂಪ್ಲೆಕ್ಸ್ನ ಅಂಗಡಿಯೊಂದರಿಂದ ಆರೋಪಿ 1 ಲಕ್ಷ ಹಣ ಕಳವು […]