ಮಂಗಳೂರು : 14ನೇ ಮಹಡಿಯ ಮನೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆ

Thursday, June 10th, 2021
Pushpalatha

ಮಂಗಳೂರು : ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಮನೆಯಿಂದ ಮಹಿಳೆಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ(64) ಎಂದು ಗುರುತಿಸಲಾಗಿದೆ. ಪುಷ್ಪಲತಾ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿಯಲ್ಲಿರುವ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನ   14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾದ ಇವರು ಈ […]

ಶೋ ರೂಮ್​ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಆತ್ಮಹತ್ಯೆ

Monday, April 5th, 2021
deeksha

ಕಡಬ : ಶೋ ರೂಮ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬುವವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಮೃತ ಯುವತಿ. ಕಡಬದ ಶೋ ರೂಮ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ದೀಕ್ಷಾ, ತನ್ನ ಮನೆ ಸಮೀಪವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸಂವಿಧಾನ ದಿನಾಚರಣೆ

Wednesday, November 28th, 2018
advocate

ಮಂಗಳೂರು: ಇಲ್ಲಿನ ವಕೀಲರ ಸಂಘದ ವತಿಯಿಂದ ನಿನ್ನೆ ಮಧ್ಯಾಹ್ನ ವಕೀಲರ ಸಂಘದ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ತಾರಾನಾಥ ಶೆಟ್ಟಿ, ಭಾರತದ ಸಂವಿಧಾನದ ಕರಡು ಪ್ರತಿ ಸಿದ್ಧಪಡಿಸಿದ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಇದೇ ವೇಳೆ ಕಿರಿಯ ನ್ಯಾಯವಾದಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಬಳ್ಳಾಲ್, ವಕೀಲರ ಸಂಘದ ಉಪಾಧ್ಯಕ್ಷೆ ಪುಷ್ಪಲತಾ, ಇಸ್ಮಾಯಿಲ್ ಹಾಗೂ ವಕೀಲರ ಸಂಘದ […]