ಟೂಲ್‌ಕಿಟ್‌ ತಿರುಚಿದ ಬಳಿಕ ಟ್ವಿಟರ್‌, ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂ ನಿಷೇಧಿಸಲು ಹೊರಟ ಕೇಂದ್ರ ಸರ್ಕಾರ

Tuesday, May 25th, 2021
social Media

ಹೊಸದಿಲ್ಲಿ: ಕಾಂಗ್ರೆಸ್‌ ನದ್ದು ಎನ್ನಲಾದ ಟೂಲ್‌ಕಿಟ್‌ ಅನ್ನು “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಉಲ್ಲೇಖೀಸಿದ್ದ ಟ್ವಿಟರ್‌ಗೆ ದಿಲ್ಲಿ ಪೊಲೀಸರ ವಿಶೇಷ ಘಟಕ ಸೋಮವಾರ ನೋಟಿಸ್‌ ಜಾರಿ ಮಾಡಿದೆ. ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ಅವರು ಟೂಲ್‌ಕಿಟ್‌ ಕುರಿತು ಮಾಡಿದ್ದ ಟ್ವೀಟ್‌ ಅನ್ನು ಟ್ವಿಟರ್‌ ಇತ್ತೀಚೆಗೆ “ತಿರುಚಿದ ಅಂಶಗಳುಳ್ಳ ವಿಷಯ’ ಎಂದು ಘೋಷಿಸದ ಬೆನ್ನಲ್ಲೇ  ಟ್ವಿಟರ್‌, ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂ ಸೇರಿದಂತೆ ಬಹುತೇಕ ಸಾಮಾಜಿಕ ಜಾಲತಾಣಗಳನ್ನು ಕೇಂದ್ರ ಸರ್ಕಾರ ನಿದೇಶಿಸಲು ಮುಂದಾಗಿದೆ. ಡಿಜಿಟಲ್‌ ಕಂಟೆಂಟ್‌ ಗಳ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರಕಾರ […]

ಕೆಎಸ್ಸಾರ್ಟಿಸಿ ನೌಕರರ ಮುಷ್ಕರ : ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್

Wednesday, April 7th, 2021
Ksrtc Bus

ಮಂಗಳೂರು :  ಕೆಎಸ್ಸಾರ್ಟಿಸಿ ನೌಕರರು ಇಂದಿನಿಂದ ಆರಂಭಿಸಿರುವ ಮುಷ್ಕರಕ್ಕೆ ದ.ಕ. ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಬಸ್ ಗಳು ಡಿಪೋದಲ್ಲೇ ಉಳಿದುಕೊಂಡಿವೆ. ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ನೌಕರರು ರಾಜ್ಯ ವ್ಯಾಪಿ ಮುಷ್ಕರ ಆರಂಭಿಸಿದ್ದಾರೆ. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ 470ಕ್ಕೂ ಅಧಿಕ ಬಸ್ ಗಳು ಬುಧವಾರ ನಿಲ್ದಾಣದಲ್ಲಿಯೇ ತಂಗಿವೆ. ಈ ನಡುವೆ ಸರಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಪ್ರಯಾಣ ಬೆಳೆಸುತ್ತಿರುವುದು ಕಂಡುಬರುತ್ತಿದೆ. ಬಸ್ […]

ಪೊಲೀಸ್ ಮೇಲೆ ದಾಳಿ ಮಾಡಲು : ಮಾಯಾ ಗ್ಯಾಂಗ್ ಮತ್ತು ಕಾರ್ಖಾನಾ ಗ್ಯಾಂಗ್

Saturday, January 30th, 2021
N shashikumar

ಮಂಗಳೂರು : ಮಂಗಳೂರು ಪೊಲೀಸ್ ಗೋಲಿಬಾರ್ ಸೇಡು ತೀರಿಸಲು ಕರ್ತವ್ಯನಿರತ ಪೊಲೀಸ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಆರೋಪದಲ್ಲಿ ಈಗಾಗಲೇ ಬಂಧಿಸಲ್ಪಟ್ಟಿರುವ ‘ಮಾಯಾ ಗ್ಯಾಂಗ್’ನ ಸದಸ್ಯರೊಂದಿಗೆ ‘ಕಾರ್ಖಾನಾ ಗ್ಯಾಂಗ್’ ಹೆಸರಿನ ಇನ್ನೊಂದು ತಂಡ ಕೈಜೋಡಿಸಿರುವ ವಿಚಾರ ತನಿಖೆಯಲ್ಲಿ ಬಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ವಶವಾಗಿರುವ ಇಬ್ರಾಹೀಂ, ಅಕ್ಬರ್ ಮತ್ತು ಮುಹಮ್ಮದ್ ಹನೀಫ್ ಎಂಬವರು ‘ಕಾರ್ಖಾನಾ ಗ್ಯಾಂಗ್’ನ ಸದಸ್ಯರು. ಇದರಲ್ಲಿ ಓರ್ವ ಕ್ರಿಮಿನಲ್ […]

ದಾರಿಯಲ್ಲಿ ಹೋಗಬೇಕಾದ ಪೊಲೀಸ್ ಜೀಪು ಅಂಗಡಿ ನುಗ್ಗಿ ಚೆಲ್ಲಾಪಿಲ್ಲಿ

Thursday, January 7th, 2021
Police Jeep

ಬೆಳ್ತಂಗಡಿ:  ಮಡಿಕೇರಿಯತ್ತ ತೆರಳ ಬೇಕಾದ  ಪೊಲೀಸ್ ಜೀಪ್ವೊಂದು ಗುರುವಾರ  ಬೆಳಗ್ಗೆ ಅಂಗಡಿಗೆ ನುಗ್ಗಿದ ಘಟನೆ ನಾರಾವಿ ಸಮೀಪದ ಈದು ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಮಡಿಕೇರಿಯತ್ತ ಇನ್ಸ್ ಪೆಕ್ಷನ್ ಗಾಗಿ ತೆರಳುತ್ತಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಜೀಪ್ನಲ್ಲಿದ್ದ ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಗಡಿ ಶೋಕೇಸ್ ಸೇರಿ ಇನ್ನಿತರ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ತಲೆಗೆ ಸ್ವಲ್ಪ ಗಾಯವಾಗಿದ್ದು, ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 52 ಕೋಣಗಳ ವಶ

Tuesday, September 15th, 2020
baffalo

ಉಡುಪಿ  : ಹೊರ ಜಿಲ್ಲೆಗಳಿಂದ ಎರಡು ಲಾರಿಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಮಂಗಳವಾರ  ಬೆಳಗ್ಗೆ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ  ಒಟ್ಟು 52 ಕೋಣಗಳನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಹರಿಹರ ತಾಲೂಕಿನ ಮೆಹಬೂಬ್(27), ಬೆಳಗಾವಿ ಬೈಲಹೊಂಗಲ ತಾಲೂಕಿನ ಬಾಪು ಸಾಹೇಬ್(46) ಮತ್ತು ಆಸಿಫ್(23) ಹಾಗೂ ದಾವಣಗೆರೆ ಹೊಸ ಚಿಕ್ಕನಹಳ್ಳಿ ಹೊಸ ಬಡಾವಣೆಯ ಇಮ್ರಾನ್(29) ಬಂಧಿತ ಆರೋಪಿಗಳು. ಎರಡು ಈಚರ್ ಲಾರಿಗಳಲ್ಲಿ ವಾಹನಗಳಲ್ಲಿ ಕ್ರಮವಾಗಿ 24 ಮತ್ತು 28 ಕೋಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ […]

ಪ್ಲಾಸ್ಮಾ ದಾನಮಾಡಿ ಕೋವಿಡ್ -19 ರೋಗಿಯ ಜೀವ ಉಳಿಸಿದ ಪೊಲೀಸ್

Saturday, September 12th, 2020
Ranjith Police

ಪುತ್ತೂರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಡಿ ಆರ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಹೆಡ್ ಕಾನ್‌ಸ್ಟೆಬಲ್ ರಂಜಿತ್ ಕುಮಾರ್ ರೈ ಅವರು ಪ್ಲಾಸ್ಮಾ ದಾನ ಮಾಡುವ ಮೂಲಕ ಕೋವಿಡ್ -19 ರೋಗಿಯ ಜೀವ ಉಳಿಸಿದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೆಯ್ಯಾರು ಗ್ರಾಮದ ಮೂಲದ ರಂಜಿತ್ ಕುಮಾರ್, ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಾದ ಬ್ರಹ್ಮವಾರ ಮೂಲದ ಪೂರ್ಣಾನಂದ ಎಂಬ ನಿವೃತ್ತ ಬ್ಯಾಂಕ್ ಅಧಿಕಾರಿ ತನ್ನ ರಕ್ತದಲ್ಲಿ ಪ್ಲಾಸ್ಮಾ ಎಣಿಕೆ ಕಡಿಮೆಯಾದ ನಂತರ ಜೀವನಕ್ಕಾಗಿ ಹೋರಾಡುತ್ತಿದ್ದಾರೆ ಎಂದು […]

ಮದುವೆ ಮಾತುಕತೆಗೆ ಕರೆಸಿ ಅತ್ಯಾಚಾರ ಎಸಗಿದ ಪೊಲೀಸ್

Thursday, September 3rd, 2020
police Rape

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ಅತ್ಯಾಚಾರ ಎಸಗಿರುವುದಾಗಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿ ಸಾಯಬಣ್ಣ ಮದುವೆಯಾಗುವುದಾಗಿ ನಂಬಿಸಿ  ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈತನ ಜೊತೆಗೆ ಬೆಂಗಳೂರಿನ ರಮೇಶ್ ಗೌಡ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 […]

ಐಕಳ ಹರೀಶ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರೋಪಿಯ ಬಂಧನಕ್ಕೆ ಒತ್ತಾಯ

Tuesday, July 21st, 2020
ikala harish shetty

ಉಡುಪಿ : ಕೆಲವು ದಿನಗಳ ಹಿಂದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಬಗ್ಗೆ ಅವರ ಘನತೆಗೆ ಧಕ್ಕೆ ಬರುವಂತೆ ಅವಹೇಳನಕಾರಿ ಸುದ್ದಿಯನ್ನು ವಾಟ್ಸಪ್ ಸೋಷಿಯಲ್ ಮೀಡಿಯಾ ಮುಖಾಂತರ ಯಾರೋ ವಿಕೃತ ಮನಸ್ಸಿನ ವ್ಯಕ್ತಿ ವೈರಲ್. ಈ ಬಗ್ಗೆ ವಿಶ್ವದಾದ್ಯಂತ ಇರುವ ಎಲ್ಲಾ ಬಂಟರ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಲು ಆಕೋಶ ವ್ಯಕ್ತಪಡಿಸಿ ಈ ಕೃತ್ಯವನ್ನು ಖಂಡಿಸಿದ್ದು ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ಬೇಕು ಎಂದು ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ ಈ ಎಲ್ಲಾ […]

ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

Saturday, July 18th, 2020
Goutham

ಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ. ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ […]

ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Friday, July 17th, 2020
Raviteja

ಶಿರಸಿ  : ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯಲ್ಲಿನ ಕಷ್ಟ ನೋಡಲಾಗದೇ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ‌ನೀರ್ನಳ್ಳಿಯಲ್ಲಿ‌ ನಡೆದಿದೆ. ನಿರ್ನಳ್ಳಿಯ ರವಿತೇಜ ಗಣಪತಿ ಭಟ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯ ನಿರ್ವಹಣೆ ಕಷ್ಟ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೊದಲು ತಿಮಿಟ್ ಸೇವಿಸಿ ನಂತರ ‌ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ […]