ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿ ದರೋಡೆಕೋರರ ಬಂಧನ

Thursday, April 15th, 2021
Robbers

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿಯನ್ನು ಬಂಧಿಸಿದ್ದು, ಈ ಮೊದಲು  9 ಮಂದಿ ದರೋಡೆಕೋರರನ್ನು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೆ.ಸಿ ರೋಡ್ನ ಮುಹಮ್ಮದ್ ಝುಬೈರ್, ಬೆಳ್ತಂಗಡಿಯ ಇಬ್ರಾಹಿಂ ಲತೀಫ್,‌ ಮೂಡಬಿದಿರೆಯ ರಾಕೇಶ್, ಅರ್ಜುನ್, ಉಪ್ಪಿನಂಗಡಿಯ ಮೋಹನ್ ಮತ್ತು ಕೋಣಾಜೆ ಬೋಳಿಯಾರ್ನ ಮನ್ಸೂರ್ ಬಂಧಿತರು. ಮಂಗಳೂರು ನಗರದಲ್ಲಿ 7 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 8, ಹಾಸನದಲ್ಲಿ 2, ಚಿಕ್ಕಮಗಳೂರಿನಲ್ಲಿ 3, ಕೊಡಗುವಿನಲ್ಲಿ 5, ಉಡುಪಿಯಲ್ಲಿ […]

ಕೆಲವೇ ಕೆಲವು ಸಮಾಜದ್ರೋಹಿಗಳಿಂದ ಮಂಗಳೂರಿಗೆ ಕೆಟ್ಟ ಹೆಸರು ಬಂದಿದೆ: ವಿಪುಲ್ ಕುಮಾರ್

Monday, June 18th, 2018
vipul-kumar

ಮಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಸುರೇಶ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಚುನಾವಣೆ ನಿಮಿತ್ತ ವರ್ಗಾವಣೆಗೊಂಡಿದ್ದ ಸುರೇಶ್ ಕುಮಾರ್ ಅವರು ಮತ್ತೆ ಮಂಗಳೂರಿಗೆ ಪೊಲೀಸ್ ಕಮೀಷನರ್ ಆಗಿ ಬಂದಿದ್ದು ನಿರ್ಗಮನ ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ಮಂಗಳೂರು ಪೊಲೀಸ್ ಕಮೀಷನರ್ ಹುದ್ದೆಯಿಂದ ವರ್ಗಾವಣೆ ಗೊಂಡಿರುವ ವಿಪುಲ್ ಕುಮಾರ್ ಅವರು ಇಂದು ಅಧಿಕಾರ ಹಸ್ತಾಂತರಕ್ಕೆ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿ, ಮಂಗಳೂರು ಮತ್ತು ಮಂಗಳೂರಿಗರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, […]

ಮಂಗಳೂರು ನೂತನ ಪೊಲೀಸ್‌‌ ಕಮೀಷನರ್‌ ಆಗಿ ವಿಪುಲ್‌ ಕುಮಾರ್‌ ಅಧಿಕಾರ ಸ್ವೀಕಾರ

Thursday, April 19th, 2018
vipul-kumar

ಮಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ವಿಪುಲ್ ಕುಮಾರ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದರು. ವಿಪುಲ್ ಕುಮಾರ್ ಅವರಿಗೆ ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಬೇರೆ ವರ್ಗಾವಣೆಗೊಂಡಿರುವ ಮಂಗಳೂರು ಪೊಲೀಸ್ ಕಮೀಷನರ್‌ ಟಿ.ಆರ್.ಸುರೇಶ್ ಅಧಿಕಾರ ಹಸ್ತಾಂತರಿಸಿದರು. 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ವಿಪುಲ್ ಕುಮಾರ್ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಇದರ ನಿರ್ದೇಶಕ ಮತ್ತು ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅಡ್ಯಾರು ಕಟ್ಟೆ ಯುವಕನ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ  ಸೆರೆ

Monday, July 10th, 2017
Adyarkatte

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರುಪದವಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ  ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ಸಿಸಿಬಿ ಪೊಲೀಸರು  ಈ ಕೊಲೆ ಯತ್ನ ಕೃತ್ಯದಲ್ಲಿ ಭಾಗಿಯಾದ  ನಿತಿನ್ ಪೂಜಾರಿ, ಪ್ರಾಯ(21), ತಂದೆ: ಸತೀಶ್ ಪೂಜಾರಿ, ವಾಸ: ಅರ್ಕುಳ ಕಂಪಾ ಮನೆ, ಫರಂಗಿಪೇಟೆ ಅಂಚೆ, ಮಂಗಳೂರು ತಾಲೂಕು. – (ವೃತ್ತಿ – ಎಲೆಕ್ಟ್ರೀಶಿಯನ್), ಪ್ರಾಣೇಶ್ ಪೂಜಾರಿ, ಪ್ರಾಯ(20), ತಂದೆ: ಮಾಧವ ಪೂಜಾರಿ, ವಾಸ; ಕೆಂಜೂರು ಮನೆ, ಅಡ್ಯಾರ್ […]

ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯ ವೆಬ್‌ಸೈಟ್‌‌ನಲ್ಲಿ ಮೋಸ್ಟ್ ವಾಂಟೆಡ್ ಆರೋಪಿಗಳ ಭಾವಚಿತ್ರ ಪ್ರಕಟ

Thursday, August 4th, 2016
mangalorecitypolice

ಮಂಗಳೂರು: ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯ ವೆಬ್‌ಸೈಟ್‌‌ನಲ್ಲಿ ರವಿ ಪೂಜಾರಿ, ಕಲಿ ಯೋಗೀಶ್, ಕೊಗರ ವಿಶ್ವನಾಥ ಶೆಟ್ಟಿ, ವಿಕ್ಕಿ ಶೆಟ್ಟಿ, ಆಸ್ಗರ್ ಆಲಿ, ರಶೀದ್ ಮಲಬಾರಿ ಸಹಿತ 153 ಮೋಸ್ಟ್ ವಾಂಟೆಡ್ ಆರೋಪಿಗಳ ಭಾವಚಿತ್ರವನ್ನು ಪ್ರಕಟಿಸಲಾಗಿದ್ದು, ಜನತೆ ಇವರ ಅಥವಾ ಇವರ ಸಹಚರರ ಮಾಹಿತಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಹಿತಿ ನೀಡುವವರ ಹೆಸರು ಸಹಿತ ವಿವರವನ್ನು ಗೌಪ್ಯವಾಗಿಡಲಾಗುವುದು. ಸೂಕ್ತ ಬಹುಮಾನ ನೀಡಲಾಗುವುದು. ಹಾಗಾಗಿ ಮಾಹಿತಿ ನೀಡಿ ಸಹಕರಿಸುವಂತೆ ಕೋರಿದರು. […]

ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕಿಗೆ ಸೂಪರ್ ಗ್ರೇಡ್

Thursday, February 25th, 2016
Manjeshwara Co operative Bank

ಮಂಜೇಶ್ವರ: 1940ರಲ್ಲಿ ಕೇವಲ 14 ಮಂದಿ ಸದಸ್ಯರು ಮತ್ತು ರೂ.535 ಪಾಲು ಬಂಡವಾಳದೊಂದಿಗೆ ಸ್ಥಾಪನೆಗೊಂಡ ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕ್ 2015 ರಲ್ಲಿ 7500 ಸದಸ್ಯರನ್ನು ಹೊಂದಿ ರೂ.93 ಲಕ್ಷ ಪಾಲು ಬಂಡವಾಳ ಹೊಂದಿದೆ. 82 ಕೋಟಿ ಠೇವಣಿ ಸಂಗ್ರಹವಾಗಿದ್ದು ಒಟ್ಟು ದುಡಿಯುವ ಬಂಡವಾಳ 94 ಕೋಟಿಯನ್ನು ಮೀರಿದೆ. ಬ್ಯಾಂಕ್ ಕ್ಷಿಪ್ರಗತಿಯಲ್ಲಿ ನಿರಂತರವಾಗಿ ಸಾಧನೆ ಮಾಡುತ್ತಾ ಬಂದಿದ್ದು ಕಳೆದ 10 ವರ್ಷಗಳಿಂದ ನಿರಂತರವಾಗಿ ಲಾಭಗಳಿಸುತ್ತಿದ್ದು ಬ್ಯಾಂಕಿನ ದಕ್ಷ ನಿರ್ವಹಣೆ, ಕರ್ತವ್ಯ ಬದ್ಧತೆಗೆ ಉದಾಹರಣೆ. ಬ್ಯಾಂಕ್ ಎ ತರಗತಿ […]