ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನಿಗೆ ಥಳಿಸಿದ ಕೆಎಸ್ಆರ್​ಟಿಸಿ ಬಸ್ ಸಿಬ್ಬಂದಿ

Monday, December 23rd, 2019
Hubballi

ಧಾರವಾಡ : ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿ ಧಾರವಾಡ ಬಸ್ನಲ್ಲಿ ನಡೆದಿದೆ. ರಾತ್ರಿ ವೇಳೆ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಹುಬ್ಬಳ್ಳಿ ವಿಭಾಗದ ಕೆಎ 25 ಎಫ್ 2995 ಬಸ್ನಲ್ಲಿ ಥಳಿತ ನಡೆದಿದೆ. ಬಸ್ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಯಾಣಿಕನ ಮೇಲಿನ ಥಳಿತಕ್ಕೆ ಕಾರಣ ತಿಳಿದು ಬಂದಿಲ್ಲ. ಪ್ರಯಾಣಿಕನನ್ನು ಥಳಿಸುವ ದೃಶ್ಯವನ್ನು ಸಹ ಪ್ರಯಾಣಿಕರು ತಮ್ಮ ಮೊಬೈಲ್ನಲ್ಲಿ‌ ಸೆರೆ ಹಿಡಿದಿದ್ದಾರೆ. […]

ಯೆಯ್ಯಾಡಿ : ಕಾರ್-ಟಿಪ್ಪರ್ ಡಿಕ್ಕಿ; ಕಾಲೇಜು ಬಸ್ ಹಿಂಭಾಗಕ್ಕೆ ನುಗ್ಗಿದ ಕಾರು

Thursday, October 31st, 2019
Yeyyadi

ಯೆಯ್ಯಾಡಿ : ಕಾರ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಕಾರು ನೇರವಾಗಿ ಕಾಲೇಜು ಬಸ್ ನಡಿಗೆ ತೂರಿದ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಕಾರಿಗೆ ಗುದ್ದಿದೆ, ಪರಿಣಾಮವಾಗಿ ಕಾರು ನೇರವಾಗಿ ಅಲ್ಲೆ ನಿಂತಿದ್ದ ಕಾಲೇಜು ಬಸ್ ನಡಿಗೆ ತೂರಿ ಹೋಗಿದೆ. ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದು, ಕಾಲೇಜು ಬಸ್ ನಲ್ಲಿ ಮಕ್ಕಳು ಇರಲಿಲ್ಲ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಠಾಣಾ […]

ಏಳು ಅಂಗಡಿಗಳಲ್ಲಿ ಸರಣಿ ಕಳ್ಳತನ: ಮದ್ಯ, ಸಿಗರೇಟ್ ಕದ್ದೊಯ್ದ ಕಳ್ಳರು

Saturday, November 3rd, 2018
escaped

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರಡು ಕಡೆ ಸರಣಿ ಕಳ್ಳತನ ನಡೆದಿದ್ದು ಏಳು ಕಡೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಬೆಳ್ತಂಗಡಿಯಲ್ಲಿ ಅನಿಲ್ ವೈನ್ಸ್ನಿಂದ ಮದ್ಯ ಕದ್ದ ಕಳ್ಳರು, ಬಿ ಎ ಟ್ರೇಡರ್ಸ್ ಎಂಬ ಅಂಗಡಿಯಿಂದ ಸಿಗರೇಟ್ ಬಾಕ್ಸ್ ಕದ್ದಿದ್ದಾರೆ. ಮಂಗಳಾ ಅಗ್ರೋ ಕೇಂದ್ರದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಘಟನೆ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿಯು ನಾಲ್ಕು ಅಂಗಡಿಗಳಲ್ಲಿ ಕಳ್ಳತನ ಆಗಿದೆ. ಮುಂಡಾಜೆಯ ಮೊಬೈಲ್ […]

ಮನೆಯೊಂದರಲ್ಲಿ ವೇಶ್ಯಾವಾಟಿಕೆ..ಇಬ್ಬರ ಸೆರೆ!

Friday, July 13th, 2018
mangaluru

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಪಡುಬಿದ್ರೆಯ ಮುದರಂಗಡಿ ಮನೆ ನಿವಾಸಿ ಸಜಿತ್ ಶೇಖರ್ (30) ಹಾಗೂ ಮಹಿಳಾ ಪಿಂಪ್ ಒಬ್ಬಾಕೆಯನ್ನು ಬಂಧಿಸಲಾಗಿದ್ದು, ಬಂಧಿತರಿಂದ 5 ಮೊಬೈಲ್ ಫೋನ್ಗಳ ಸಹಿತ 15,240 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಸಜಿತ್ ಶೇಖರ್ ಈ ಮನೆಯನ್ನು ಬಾಡಿಗೆಗೆ ಪಡೆದು ಮಹಿಳಾ ಪಿಂಪ್ ಜೊತೆ ಯುವತಿಯರನ್ನು ಈ ಮನೆಯಲ್ಲಿ […]

ಪುತ್ತೂರಲ್ಲಿ ಆನೆ ದಾಳಿಗೆ ರೈಲ್ವೆ ಕಾರ್ಮಿಕ ಬಲಿ, ಇಬ್ಬರಿಗೆ ಗಾಯ

Wednesday, March 7th, 2018
elephent

ಮಂಗಳೂರು: ಆನೆ ದಾಳಿಯಿಂದ ರೈಲ್ವೆ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಕಡಬದ ಕೊಂಬಾರು ಗ್ರಾಮದಲ್ಲಿ ನಡೆದಿದೆ. ಆನೆ ದಾಳಿಗೆ ಬಲಿಯಾದ ಕಾರ್ಮಿಕ ಸಂತೋಷ್ ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಪಕ್ಕ ಮಲಗಿದ್ದ ಮೂವರು ಕಾರ್ಮಿಕರ ಮೇಲೆ ರಾತ್ರಿ ಆನೆ ದಾಳಿ ನಡೆಸಿದೆ. ಈ ವೇಳೆ ತೀವ್ರ ಗಾಯಗೊಂಡಿದ್ದ ಸಂತೋಷ್‌ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.