ದಂಡ ವಿಧಿಸಿದ್ದಕ್ಕೆ ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

Monday, March 11th, 2024
Mohammad-Ansar

ಮಂಗಳೂರು : ಆಟೋ ಚಾಲಕನಿಗೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ಬಿಸಿರೋಡಿನ ‌ಕೈಕಂಬ ಎಂಬಲ್ಲಿ ಇಂದು ಸೋಮವಾರ ಬೆಳಿಗ್ಗೆ ನಡೆದಿದೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದಾನೆ. ಬಿಸಿ ರೋಡ್​ನಲ್ಲಿ ಸಮವಸ್ತ್ರ ಧರಿಸದೆ ಮೊಬೈಲ್​ನಲ್ಲಿ ಮಾತಾಡುತ್ತ ಆಟೋ ಚಲಾಯಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪಿಎಸ್​ಐ ಸುತೇಶ್ ಮತ್ತು ಸಿಬ್ಬಂದಿ ಆಟೋ ತಡೆದಿದ್ದಾರೆ. ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ […]

ಮಂಗಳೂರು ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ.

Saturday, October 16th, 2010
ಪೊಲೀಸ್ ಪ್ರಧಾನ ಕಛೇರಿಯಲ್ಲಿ ಆಯುಧ ಪೂಜೆ

ಮಂಗಳೂರು: ನಗರದ ಪೊಲೀಸ್ ಪ್ರಧಾನ ಕಛೇರಿಯಲ್ಲಿ ಇಂದು ಬೆಳಿಗ್ಗೆ ಇಲಾಖೆಯ ತುಪಾಕಿಗಳಿಗೆ ಮತ್ತು ವಾಹನಗಳಿಗೆ ಆಯುಧ ಪೂಜೆಯನ್ನು ಮಾಡಲಾಯಿತು. ಐಜಿಪಿ ಅಲೋಕ್ ಮೋಹನ್, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಸ್.ಪಿ ಸುಬ್ರಹ್ಮಣ್ಯೇಶ್ವರ ರಾವ್ ಆಯುಧ ಪೂಜೆಯಲ್ಲಿ ಭಾಗವಹಿಸಿದ್ದರು. ಎಡಬಿಡದೆ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ವಾಹನಗಳು, ಪೊಲೀಸರ ಹೆಗಲೇರುತ್ತಿದ್ದ ತುಪಾಕಿಗಳು ಇಂದು ಸ್ವಚ್ಚವಾಗಿ ಸುಂದರವಾಗಿ ಅಲಂಕರಿಸಲ್ಪಟ್ಟಿದ್ದವು ಪೂಜೆಯಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.