ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

Monday, April 15th, 2024
ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಸರಿಯಾಗಿ 7.36ಕ್ಕೆ ನಾರಾಯಣ ಗುರು ವೃತ್ತದ ಬಳಿಗೆ ಆಗಮಿಸಿ 7.39ಕ್ಕೆ ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿ ರೋಡ್ ಶೋಗಾಗಿ ಸಿದ್ಧಪಡಿಸಲಾದ ಅಲಂಕೃತ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಗಾಗಿ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಸಾವಿರಾರು ಮಂದಿ ಜಮಾಯಿಸಿ ಪ್ರಧಾನಿ ಮೋದಿ ಅವರಿಗೆ […]

ಎಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

Monday, April 8th, 2024
sunil-kumar

ಮಂಗಳೂರು: ಎಪ್ರಿಲ್ 14ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಗೆ ಸಂಜೆ 3ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕರ್ನಾಟಕ ಚುನಾವಣಾ ಪ್ರವಾಸದ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ನರೇಂದ್ರ ಮೋದಿ ಎ.14ರಂದು ಮಂಗಳೂರಿನ ಕಾರ್ಯಕ್ರಮ ಮುಗಿಸಿ ಸಂಜೆ 5.30ಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ದಲ್ಲಿ ಭಾಗವಹಿಸಲಿದ್ದಾರೆ ಎಂದು ಸುನಿಲ್ […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಆರ್‌ಎಸ್‌ಎಸ್ ಕಾರ್ಯಕರ್ತ ಗಣೇಶ್ ಶೆಣೈ ಮುಲ್ಕಿ ಪ್ರಧಾನಿಗೆ ಮನವಿ

Monday, December 4th, 2023
Ganesh-Shenoy

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕೋರಿ ಆರ್‌ಎಸ್‌ಎಸ್ ಹಿರಿಯ ಕಾರ್ಯಕರ್ತ, ಬಿಎಂಎಸ್ ಮುಖಂಡ ಗಣೇಶ್ ಶೆಣೈ ಮುಲ್ಕಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪತ್ರದ ಪ್ರತಿಯ ಜತೆ ಈ ಮಾಹಿತಿ ಹಂಚಿಕೊಂಡ ಗಣೇಶ್ ಶೆಣೈ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ಶೇ.55 ಅಧಿಕಗೊಂಡಿದೆ. ಭೂಮಿ ರಿಜಿಸ್ಟ್ರೇಷನ್ ದರ, […]

ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ : ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

Saturday, September 4th, 2021
Rajesh Naik

ಬಂಟ್ವಾಳ  : ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಯನ್ನು ಸಹಿಸಲಾರದೆ ಅಪಪ್ರಚಾರದಲ್ಲಿ ತೊಡಗಿದೆ ,ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಗೋಳ್ತಮಜಲು ಗ್ರಾಮದಲ್ಲಿ ಒಟ್ಟು 6 ಬೂತ್ ಗಳ ಬಿಜೆಪಿ ಬೂತ್ ಅಧ್ಯಕ್ಷ ರ ಮನೆಯಲ್ಲಿ ನಾಮಫಲಕ ಅಳವಡಿಸಿದ ಬಳಿಕ ಮಾತನಾಡಿದರು. ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡದೆ, ಸಮಯ ವ್ಯಯ ಮಾಡದೆ ಪಕ್ಷ ಸಂಘಟನೆ ಮಾಡಿ, ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು ಗ್ರಾಮದ ಪ್ರತಿಮನೆಗೆ […]

ಬಿಜೆಪಿ ಪರ ಜನತೆಯ ವಿಶ್ವಾಸ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಸಂತಸ

Thursday, July 8th, 2021
Nalin Kumar

ಮಂಗಳೂರು : ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಸಾಬೀತು ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಮೇಲೆ ವಿಶ್ವಾಸ ಇರಿಸಿದ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿತ್ತು. ಈ […]

ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಶಿಕ್ಷಣದ ಜೊತೆಗೆ, 10 ಲಕ್ಷ ಹಣ

Saturday, May 29th, 2021
PMModi

ನವದೆಹಲಿ: ಮೋದಿ ಸರ್ಕಾರ ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎರಡನೇ ವರ್ಷ ಪೂರ್ಣಗೊಳಿಸುತ್ತಿರುವ ನಡುವೆ ಮೇ.29 ರಂದು ಮಹತ್ವದ ಘೋಷಣೆ ಪ್ರಕಟಿಸಿದೆ. ಮಕ್ಕಳು 18 ವರ್ಷದವರಾಗುತ್ತಿದ್ದಂತೆಯೇ 10 ಲಕ್ಷ ಹಣ ದೊರೆಯಲಿದ್ದು ಶಿಕ್ಷಣವೂ ದೊರೆಯಲಿದೆ. ಕೋವಿಡ್-19 ನಿಂದ ಅನಾಥರಾದ ಮಕ್ಕಳಿಗಾಗಿ ಯೋಜನೆ ರೂಪಿಸುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮಕ್ಕಳಿಗಾಗಿ ಪಿಎಂ-ಕೇರ್ಸ್ ಯೋಜನೆಯಡಿ ನೆರವು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಯೋಜನೆಯ ಬಗ್ಗೆ ಪ್ರಧಾನಿಗಳ ಕಚೇರಿ […]

ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆಗೆ ಕರಾವಳಿಯಲ್ಲಿ ಬೆಂಬಲ

Sunday, March 22nd, 2020
kaladka

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಜನತಾ ಕರ್ಫ್ಯೂಗೆ ಕರಾವಳಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ಮಂಗಳೂರು- ಉಡುಪಿ ನಗರದಲ್ಲಿ ಯಾವುದೇ ಕೆಎಸ್ ಆರ್ ಟಿಸಿ ಮತ್ತು ಖಾಸಗಿ ಬಸ್ ಗಳು ಸಂಚರಿಸುತ್ತಿಲ್ಲ. ಉಭಯ ಜಿಲ್ಲೆಗಳ ಸಾರ್ವಜನಿಕ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಹೊಟೇಲ್ ಗಳು, ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಗಳು ಬಂದ್ ಗಳು ಸಂಪೂರ್ಣ ಬಂದ್ ಆಗಿದೆ. ಆಟೋ, ಮ್ಯಾಕ್ಸಿ ಕ್ಯಾಬ್ ಗಳು ಬೀದಿಗಿಳಿದಿಲ್ಲ. ತುರ್ತು ಸೇವೆಗಳನ್ನು ಹೊರತು ಪಡಿಸಿ ನಗರ ಪೂರ್ತಿ ಬಂದ್‌ ಆಗಿದೆ. ಮಂಗಳೂರಿನಲ್ಲಿ […]

ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಜತೆ ಮುಖಾಮುಖಿ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ

Tuesday, March 10th, 2020
modi

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಜತೆ ಮುಖಾಮುಖಿ ಚರ್ಚೆ ನಡೆಸಿ ರಾಜ್ಯದ ರಾಜಕೀಯ ಚಿತ್ರಣದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯದಲ್ಲಿ ಈಗಿನಿಂದಲೇ ಸಿದ್ದತೆ ಆರಂಭಿಸುವುದು ಮೋದಿ ಅವರ ಉದ್ದೇಶ. ಅದಕ್ಕಾಗಿ ಸಂಸತ್‌ನ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿಯೇ ರಾಜ್ಯದಿಂದ ಆಯ್ಕೆಯಾಗಿರುವ ಪಕ್ಷದ ಸಂಸದರ ಜತೆ ಚರ್ಚೆ ನಡೆಸಲು ಪ್ರಧಾನಿ ನಿರ್ಧರಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಆಡಳಿತ […]

ಕೊರೋನಾ ವೈರಸ್​ ಭೀತಿ : ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸ ರದ್ದು

Monday, March 9th, 2020
PM

ನವದೆಹಲಿ : ವಿಶ್ವದೆಲ್ಲೆಡೆ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ. ಎಲ್ಲವೂ ಅಂದುಕೊಂಡತೆ ನಡೆದಿದ್ದರರೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾಜೊತೆಗೆ ದ್ವಿಪಕ್ಷೀಯ ಮಾತುಕತೆಗಾಗಿ ಇಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಅಲ್ಲದೆ, ವಿವಿಧ 7 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮಾರಣಾಂತಿಕ ಕೊರೋನಾ ವೈರಸ್ ಭೀತಿ ಎಲ್ಲೆಡೆ ವ್ಯಾಪಿಸಿರುವ ಕಾರಣ ಮೋದಿ ಅವರ ಆರೋಗ್ಯದ ಹಿತದೃಷ್ಟಿಯಿಂದ ಬಾಂಗ್ಲಾ ಪ್ರವಾಸವನ್ನು ರದ್ದು ಮಾಡಲಾಗಿದೆ […]

ಟ್ವೀಟ್‌ ಮೂಲಕ ಬಿ.ಎಸ್ ಯಡಿಯೂರಪ್ಪಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

Thursday, February 27th, 2020
modi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 78ನೇ ವಸಂತಕ್ಕೆ ಕಾಲಿರಿಸಿದ ಬಿಎಸ್‌ವೈಗೆ ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ. ಟ್ವೀಟ್‌ ಮೂಲಕ ಯಡಿಯೂರಪ್ಪ ಜನ್ಮದಿನಕ್ಕೆ ಶುಭಾಶಯ ಸಲ್ಲಿಸಿದ ಮೋದಿ, “ಕರ್ನಾಟಕದ ಶ್ರಮಶೀಲ ಸಿಎಂ ಯಡಿಯೂರಪ್ಪ ಅವರಿಗೆ ಶುಭಾಶಯಗಳು. ಅವರು ರಾಜ್ಯದ ಪ್ರಗತಿಗೆ, ವಿಶೇಷವಾಗಿ ರೈತರ ಕಲ್ಯಾಣ, ಗ್ರಾಮೀಣಾಭಿವೃದ್ದಿಗೆ ಅಪಾರ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ದೀರ್ಘ ಆಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ. ಬಿಎಸ್‌ವೈ ಹುಟ್ಟುಹಬ್ಬದ ರಾಜ್ಯದ ಹಲವು ಮುಖಂಡರು ಶುಭಕೋರಿದ್ದಾರೆ. ಟ್ವಿಟ್ಟರ್‌ನಲ್ಲಿ, […]