ಕುಕ್ಕೆ ಮಠದಲ್ಲಿಯೂ ಸರ್ಪ ಸಂಸ್ಕಾರ ಸೇವೆ ಮಾಡಬಹುದು, ಅದು ಮಾತ್ರ ಶಾಸ್ತ್ರೋಕ್ತ: ಪ್ರಮೋದ್ ಮುತಾಲಿಕ್

Saturday, September 1st, 2018
pramod-muthalik

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ, ಆಶ್ಲೇಷಾ ಪೂಜೆ ಸೇರಿದಂತೆ ನಡೆಯುವ ಸೇವೆಗಳು ಶಾಸ್ತ್ರೋಕ್ತವಲ್ಲ. ಸುಬ್ರಹ್ಮಣ್ಯ ಮಠದಲ್ಲಿ ನಡೆಯುವ ಸೇವೆಗಳು ಮಾತ್ರ ಶಾಸ್ತ್ರೋಕ್ತವಾದವು ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯಶ್ಚಿತವಾಗಿ ಮಾಡುವ ಸರ್ಪ ಸಂಸ್ಕಾರ, ಆಶ್ಲೇಷಾ ಪೂಜೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕವಾಗಿ ಮಾಡಲಾಗುತ್ತದೆ. ಸಾಮೂಹಿಕವಾಗಿ ಸತ್ಯನಾರಾಯಣ ಪೂಜೆ ಮೊದಲಾದವುಗಳನ್ನು ಮಾಡುವುದು ಜಾಗೃತಿಗಾಗಿ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಡುವ ಸಾಮೂಹಿಕ ಪೂಜೆ ಶಾಸ್ತ್ರೋಕ್ತವಲ್ಲ. ಮಠದಲ್ಲಿ ನಡೆಯುವ ಸೇವೆಗಳು […]

ಪ್ರಮೋದ್‌ ಮುತಾಲಿಕ್‌ ಶಿವಸೇನೆಯಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ

Thursday, November 2nd, 2017
pramod muthalik

ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ, ರಾಜ್ಯದ ಗಡಿ ವಿಚಾರದಲ್ಲಿ ಪದೇಪದೇ ತಗಾದೆ ತೆಗೆದು ಮಹಾರಾಷ್ಟ್ರ ಪರ ದನಿ ಎತ್ತುವ ಶಿವಸೇನೆ ಪಕ್ಷದ ಟಿಕೆಟ್‌ನಿಂದಲೇ ಸ್ಪರ್ಧಿಸಲು ಇದೀಗ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಮುಂದಾಗಿದ್ದಾರೆ! ಈ ವಿಚಾರವನ್ನು ಖುದ್ದು ಮುತಾಲಿಕ್‌ ಅವರೇ ತಿಳಿಸಿದ್ದಾರೆ. ಮಂಗಳೂರಿಗೆ ಸೋಮವಾರ ಭೇಟಿ ನೀಡಿದ್ದ ವೇಳೆ ಉದಯವಾಣಿಯೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ತಮ್ಮ ಸಂಘಟನೆ ತೆಗೆದುಕೊಳ್ಳುವ ತೀರ್ಮಾನಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ಹೇಳಿದ್ದಿಷ್ಟು: “ಶಿವಸೇನೆಯನ್ನು ಕರ್ನಾಟಕದಲ್ಲಿ ಕಟ್ಟುವ ನೆಲೆಯಲ್ಲಿ ಹಾಗೂ […]

ಮುತಾಲಿಕ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ :ರಮಾನಾಥ ರೈ

Monday, October 9th, 2017
ramanath rai

ಮಂಗಳೂರು: ಪ್ರಮೋದ್ ಮುತಾಲಿಕ್ ಒಬ್ಬ ದಾರಿಹೋಕ. ಆತನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಕಿಡಿ ಕಾರಿದರು. ಭಾರತ ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತದೆ ಎಂದ ಪ್ರಮೋದ್ ಮುತಾಲಿಕ್ ಪ್ರತಿ ಹಿಂದೂ ಕುಟುಂಬ ರಕ್ಷಣೆಗೆ ತಲವಾರ್ ಹೊಂದಿರಬೇಕು ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ವಿರುದ್ಧ ಇಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಗೆ ಯಾರು ಹಿಂದೂ ಧರ್ಮದ ಪಾರುಪತ್ಯ […]

ರಾಜ್ಯದಲ್ಲಿ ಶಾಂತಿ ಸಾಮರಸ್ಯ ಸಾಧಿಸಲು ನಾವೆಲ್ಲರೂ ಹೋರಾಡಬೇಕು: ಪ್ರಮೋದ್ ಮುತಾಲಿಕ್

Wednesday, October 19th, 2016
Muthalik

ಮಂಗಳೂರು: ದಲಿತರ ಮತ್ತು ದಮನಿತರ ಹಕ್ಕುಗಳಿಗಾಗಿ ನಡೆದ ‘ಉಡುಪಿ ಚಲೋ’ ಚಳವಳಿ ‘ಆಹಾರ ನಮ್ಮ ಆಯ್ಕೆ, ಭೂಮಿ ನಮ್ಮ ಹಕ್ಕು’ ಎಂಬ ಘೋಷಣೆಯಡಿ ನಡೆಯಿತು. ಆದರೆ ಕೆಲ ವಿಕೃತವಾದಿಗಳು ಮತ್ತು ಬುದ್ಧಿಗೇಡಿಗಳು ಉಡುಪಿ ಚಲೋ ಚಳವಳಿ ನೆಪದಲ್ಲಿ ಕರ್ನಾಟಕದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದರು. ಪಬ್ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಲು ಬಂದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುತಾಲಿಕ್, ಕನಕ ನಡೆಗೆ ತಮ್ಮ ಬೆಂಬಲವಿದೆ ಹಾಗೂ ರಾಜ್ಯದಲ್ಲಿ ಶಾಂತಿ […]