ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ ದಂಡ : ಜಿಲ್ಲಾಧಿಕಾರಿ

Thursday, September 24th, 2020
Rajendra KV

ಮಂಗಳೂರು: ಮಾಸ್ಕ್ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿ ಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ […]

ಚೀನಾದ ಶಾಂಘೈನಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆ ಕುಸಿದ ರಸ್ತೆ : ಹತ್ತು ಪ್ರಯಾಣಿಕರು ನಾಪತ್ತೆ

Tuesday, January 14th, 2020
china

ಶಾಂಘೈ : ಬಸ್ಸೊಂದು ಸಂಚರಿಸುತ್ತಿದ್ದ ವೇಳೆಯೇ ರಸ್ತೆ ಕುಸಿದು ಹೋದ ಪರಿಣಾಮ ಬಸ್ ನಲ್ಲಿದ್ದ ಕನಿಷ್ಠ ಹತ್ತು ಪ್ರಯಾಣಿಕರು ನಾಪತ್ತೆಯಾದ ಘಟನೆ ಚೀನಾದ ಶಾಂಘೈನಲ್ಲಿ ನಡೆದಿದೆ. ಈ ಅವಗಢ ಸೋಮವಾರ ಸಂಜೆಯ ವೇಳೆಗೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗ್ರೇಟ್ ವಾಲ್ ಆಸ್ಪತ್ರೆಗೆ ಮುಂಭಾಗದಲ್ಲಿ ರಸ್ತೆಯ ಒಂದು ಭಾಗ ಕುಸಿದು ಕಂದಕ ಉಂಟಾಗಿದೆ. ಅದೇ ವೇಳೆ ಅಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕ ಸಂಸ್ಥೆಯ ಬಸ್ ಅದರೊಳಗೆ ಬಿದ್ದಿದೆ. ಬಸ್ ಬಿದ್ದ ರಭಸಕ್ಕೆ ಅದು ಸ್ಫೋಟಗೊಂಡಿದೆ ಎಂದು […]

ಬೆಂಗಳೂರಿನ ನೈಸ್​ ರಸ್ತೆಯಲ್ಲಿ ಮುಂಜಾನೆ ಹೊತ್ತಿ ಉರಿದ ಕಾರು : ಅಪಾಯದಿಂದ ಪಾರಾದ ಪ್ರಯಾಣಿಕರು

Monday, November 11th, 2019
car

ಬೆಂಗಳೂರು : ಕುಟುಂಬ ಸಮೇತ ಮೈಸೂರಿಗೆ ಪ್ರಯಾಣಿಸುತ್ತಿದ್ದವರ ಕಾರು ನೈಸ್ ರಸ್ತೆಯಲ್ಲಿ ಹಠಾತ್ ಬೆಂಕಿ ಹರಡಿ ಹೊತ್ತು ಉರಿಯಿತು. ಮೈಸೂರು ಮಾರ್ಗದಲ್ಲಿ ವೃಷಾಭಾವತಿ ಬ್ರಿಡ್ಜ್ ಬಳಿ ತೆರಳುತ್ತಿದ್ದ ವೇಳೆ ಕಾರಿನ ಇಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿತು. ನಂತರ ಬೆಂಕಿ ಇಡೀ ಕಾರಿಗೆ ಹರಡುತ್ತಿತ್ತು. ಕೂಡಲೇ ಚಾಲಕ ಕಾರು ನಿಲ್ಲಿಸಿದ. ತಕ್ಷಣ ಕಾರಿನಲ್ಲಿ ಇದ್ದವರು ಜಿಗಿದು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಟುಂಬದ 5 ಮಂದಿ ಮೈಸೂರಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಕೂಡಲೇ ಅಗ್ನಿಶಾಮಕ […]

ಕುಂದಾಪುರದತ್ತ ಸಾಗುತ್ತಿದ್ದ ಖಾಸಗಿ ಬಸ್‌ ಕಾರಿಗೆ ಢಿಕ್ಕಿ ಹೊಡೆದು ಹಲವರಿಗೆ ಗಾಯ

Saturday, September 3rd, 2016
Kundapur-accident

ಕುಂದಾಪುರ: ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಅನ್ನುವಳ್ಳಿ ಸೇತುವೆ ಬಳಿ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತೀರ್ಥಹಳ್ಳಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಬಸ್ಸು ಮೇಗರವಳ್ಳಿ ಹತ್ತಿರ ಬರುತ್ತಿದ್ದಾಗ ಆಗುಂಬೆಯಿಂದ ತೀರ್ಥಹಳ್ಳಿಯತ್ತ ಸಾಗುತ್ತಿದ್ದ ಕಾರು ಬಸ್ಸಿನ ಹಿಂಬದಿಯ ಚಕ್ರಕ್ಕೆ ಬಲವಾಗಿ ಢಿಕ್ಕಿಹೊಡೆದ ಪರಿಣಾಮ ಬಸ್ಸಿನ ಹೌಸಿಂಗ್‌ ಪೂರ್ಣ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿದ ಬಸ್‌ ಪಲ್ಟಿಯಾಗಿತ್ತು. ಪಲ್ಟಿಯಾದ ರಭಸಕ್ಕೆ ಬಸ್ಸು ನಜ್ಜುಗುಜ್ಜಾಗಿತ್ತು. ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಕುಂದಾಪುರದ ಬಳಿಯ ಬಸ್ರೂರಿನ ಸಯ್ಯದ್‌ಮಹಜಾಲಿನ್‌ ಹಾಗೂ […]

ಕೆ.ಎಸ್.ಆರ್.ಟಿ.ಸಿ ವೋಲ್ವೊ ಬಸ್ ದರ-ಬೆಜ್ಜಿಬಿದ್ದ ಪ್ರಯಾಣಿಕರು

Wednesday, October 22nd, 2014
ksrtc

ಮುಂಬಯಿ : ಮಂಗಳೂರು-ಮುಂಬಯಿ ಅಥವಾ ಮುಂಬಯಿ-ಮಂಗಳೂರು ಪ್ರಯಾಣ ತುಳು ಕನ್ನಡಿಗರ ಪಾಲಿಗೆ ಕಂಠಕವಾಗುತ್ತಿದ್ದು, ಈ ಮಾರ್ಗವಾಗಿ ಸೇವೆಗೈಯುವ ಬಸ್ ಗಳಲ್ಲಿ ಯಾವುದೇ ಸುಸಮಯ ಬಂದಾಗ (ಸೀಝನ್) ಅತೀಯಾದ ದರ ಬೆಳೆಸಿ ಪ್ರಯಾಣಿಕರನ್ನು ಸಂಕಷ್ಟಕ್ಕೊಳ ಪಡಿಸುವ ಬಸ್ ಸಂಸ್ಥೆಗಳ ಉಪಟಲ ತೀರಾ ಖಂಡನೀಯ ಎಂದು ಪ್ರಯಾಣಿಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಸಂಸ್ಥೆಯ ವೋಲ್ವೊ ಬಸ್ ದರವೂ ಪ್ರಯಣಿಕರನ್ನು ಕೆರಳಿಸಿದೆ. ಮಂಗಳೂರು-ಮುಂಬಯಿ ಮತ್ತು ಬೆಂಗಳೂರು-ಮುಂಬಯಿ […]

ಓವರ್ ಟೇಕ್ : ಬಸ್ ಹೊಂಡಕ್ಕೆ 24 ಮ೦ದಿಗೆ ಗಾಯ

Wednesday, June 27th, 2012
Bus Accident

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಬುಧವಾರ ಬೆಳಿಗ್ಗೆ ಖಾಸಗಿ ಬಸ್ಸೊಂದು ಅತೀ ವೇಗದ ಚಾಲನೆಯಿಂದ ಉರುಳಿ ಬಿದ್ದ ಪರಿಣಾಮ 24 ಪ್ರಯಾಣಿಕರು ಗಾಯಗೊಂಡು ಇಬ್ಬರ ಸ್ಥಿತಿ ಗಂಭೀರವಾಗಿದೆ. ಬುಧವಾರ ಪೂರ್ವಾಹ್ನ 11ರ ಸುಮಾರಿಗೆ ಈ ಬಸ್‌ ಮಂಗಳೂರಿನಿಂದ ತಲಪಾಡಿಯ ಕಿನ್ಯಕ್ಕೆ ತೆರಳುತ್ತಿತ್ತು. ಕಲ್ಲಾಪು ಸಮೀಪದ ಆಡಂಕುದ್ರು ಬಳಿ ಬಲಬದಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮಣ್ಣಿನ ರಸ್ತೆಗೆ ಚಾಲಕ ಬಸ್ಸನ್ನು ವೇಗವಾಗಿ ತಿರುಗಿಸಿದ್ದು, ಅದೇ ವೇಳೆಗೆ ಎದುರಿನಿಂದ ಬಂದ ಇನ್ನೊಂದು ಖಾಸಗಿ ಬಸ್‌ಗೆ ಸೈಡ್‌ ನೀಡಲೆಂದು […]