ಪ್ರವಾಹ ಪರಿಹಾರ ನಿಧಿ ಸಂಗ್ರಹದ ಲೆಕ್ಕ ಕೇಳಲು ಹರೀಶ್ ಪೂಂಜಾ ಕಚೇರಿಗೆ ಮುತ್ತಿಗೆ
Monday, August 24th, 2020ಮಂಗಳೂರು: ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ನಿಧಿಯನ್ನು ಸ್ಥಾಪನೆ ಮಾಡಲಾಗಿದ್ದು ಅದರ ಲೆಕ್ಕ ಕೊಡಲಿಲ್ಲ ಎಂದು ಆರೋಪಿಸಿ ಮಾಜಿ ಶಾಸಕ ವಸಂತ್ ಬಂಗೇರಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಮುತ್ತಿಗೆ ಹಾಕಿ ಪ್ರವಾಹ ಪರಿಹಾರದ ಲೆಕ್ಕ ತೋರಿಸಬೇಕೆಂದು ಒತ್ತಾಯಿಸಿದ ಘಟನೆ ಸೋಮವಾರ ಬೆಳ್ತಂಗಡಿಯಲ್ಲಿ ನಡೆದಿದೆ. ಶಾಸಕರ ಕಚೇರಿಯನ್ನು ಮುತ್ತಿಗೆ ಹಾಕುವ ಪ್ರಯತ್ನದ ವೇಳೆ ವಸಂತ್ ಬಂಗೇರಾ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟಿನ ಬಳಿಯೇ ಪ್ರತಿಭಟನಾಕಾರರನ್ನು ಪೊಲೀಸರಿಗೆ ತಡೆದಿದ್ದಾರೆ. ಪ್ರತಿಭಟನಾಕಾರರು ಮಾಸ್ಕ್ ಗಳನ್ನು ಧರಿಸಿರಲಿಲ್ಲ ಮತ್ತು […]