ನಿರಂತರ ಗೋಹತ್ಯೆ ಆರೋಪ : ಕುದ್ರೋಳಿ ಕಸಾಯಿಖಾನೆ‌ ಮುಚ್ಚಲು ವಿಎಚ್‌ಪಿ ಆಗ್ರಹ

Monday, October 29th, 2018
vishwa-hindu

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನಿದೆ. ಆದರೆ ಮಂಗಳೂರು ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಯಲ್ಲಿ ಮನಪಾ ಅಧಿಕಾರಿಗಳ ಅನುಮೋದನೆಯಿಂದಲೇ ಗೋಮಾತೆಯನ್ನು ವಧಿಸಲಾಗುತ್ತಿದೆ. ತಕ್ಷಣ ಕುದ್ರೋಳಿ ಕಸಾಯಿಖಾನೆ‌ ಮುಚ್ಚಬೇಕು ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಾಗಿ ವಿಎಚ್‌ಪಿ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ಕುದ್ರೋಳಿ ಕಸಾಯಿಖಾನೆಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಅಲ್ಲಿ ನಿರಂತರ ಗೋಹತ್ಯೆ ನಡೆಯುತ್ತಿದೆ. ಪ್ರತಿ ತಿಂಗಳು 350-400 […]

ನಾವು ಸಂಗೀತಕ್ಕೆ ವಿರೋಧಿಗಳಲ್ಲ..ಅದರ ಹೆಸರಿನಲ್ಲಿ ಡ್ಯಾನ್ಸ್ ಮತ್ತಿತ್ಯಾದಿಗಳಿಗೆ ವಿರೋಧವಿದೆ: ಆಶಾ ಜಗದೀಶ್

Tuesday, June 19th, 2018
bajarangdal

ಮಂಗಳೂರು: ನಗರದ ಹಲವು ಕಡೆ ಲೈವ್‌ಬ್ಯಾಂಡ್, ಲೇಡಿಸ್ ಬಾರ್, ಪಬ್, ಮಸಾಜ್ ಸೆಂಟರ್‌ಗಳಿಗೆ ಕಡಿವಾಣ ಹಾಕದಿದ್ದರೆ ಈ ಹಿಂದೆ ಪಬ್ ಮೇಲೆ ನಡೆದ ದಾಳಿ ಪ್ರಕ್ರಿಯೆಗಳು ಮರುಕಳಿಸಬಹುದು ಎಂದು ವಿಎಚ್‌ಪಿ ಮಹಿಳಾ ಪ್ರಮುಖ್ ಆಶಾ ಜಗದೀಶ್ ತಿಳಿಸಿದ್ದಾರೆ. ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾವು ಸಂಗೀತಕ್ಕೆ ವಿರೋಧಿಗಳಲ್ಲ. ಆದರೆ, ಅದರ ಹೆಸರಿನಲ್ಲಿ ಡ್ಯಾನ್ಸ್ ಮತ್ತಿತ್ಯಾದಿಗಳಿಗೆ ವಿರೋಧವಿದೆ. ನಗರದ ಹಲವು ಕಡೆಗಳಲ್ಲಿ ಲೈವ್‌ಬ್ಯಾಂಡ್, ಲೇಡಿಸ್ ಬಾರ್ ಮತ್ತಿತ್ಯಾದಿ ತಲೆ ಎತ್ತುತ್ತಿವೆ. ಅದಕ್ಕೆ ಕಡಿವಾಣ ಹಾಕಬೇಕು ಎಂದರು. […]