ಸಾಂಪ್ರದಾಯಿಕ ವಸ್ತ್ರಧಾರಣೆಯ ವಿಚಾರದಲ್ಲಿ ಯನೆಪೊಯೆ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಒಡೆದಾಟ

Saturday, October 30th, 2021
Group Assult

ಮಂಗಳೂರು: ನಗರದ ಮೂಡುಬಿದಿರೆ ಯನೆಪೊಯೆ ಎಂಜಿನಿಯರಿಂಗ್ ಕಾಲೇಜಿನ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಘಟನೆ ವೇಳೆ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಐವರು ವಿದ್ಯಾರ್ಥಿಗಳ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆದಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ನಿನ್ನೆ ಕಾಲೇಜಿನಲ್ಲಿ ಸಾಂಪ್ರದಾಯಿಕ ವಸ್ತ್ರಧಾರಣೆಯ ವಿಚಾರದಲ್ಲಿ ಪೂರ್ವ ತಯಾರಿ ನಡೆದಿತ್ತು. ಇದೇ ವಸ್ತ್ರದ ವಿಚಾರದಲ್ಲಿ ಒಂದು ತಂಡದ ವಿದ್ಯಾರ್ಥಿಗಳು ಮತ್ತೊಂದು ತಂಡದ […]

ಮುಕ್ಕದ ಶ್ರೀನಿವಾಸ ಕಾಲೇಜಿನಲ್ಲಿ ರ‍್ಯಾಗಿಂಗ್, ಪ್ರಾಶುಂಪಾಲರಿಗೆ ನಾಲ್ವರು ವಿದ್ಯಾರ್ಥಿಗಳಿಂದ ಹಲ್ಲೆ

Friday, March 5th, 2021
Raging

ಮಂಗಳೂರು : ಸುರತ್ಕಲ್ ಮುಕ್ಕದ ಶ್ರೀನಿವಾಸ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ ಪ್ರಾಶುಂಪಾಲರಿಗೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ಮಾಡಿದ ಘಟನೆ ನಡೆದಿದೆ. ಕಾಲೇಜು ಪ್ರಾಶುಂಪಾಲರು ಈ ಬಗ್ಗೆ ದೂರು ದಾಖಲಿಸಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಾದ ಮಹಮ್ಮದ್‌ ಬಾಝಿಲ್‌, ಸಂಭ್ರಮ್‌ ಆಳ್ವ, ಸಮೀಲ್‌, ಅಶ್ವಿನ್‌ ಎಸ್‌. ಜಾನ್ಸನ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಮಾ.3ರ ಬುಧವಾರ ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಶುಂಪಾಲರ ಗಮನಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಕರೆದ […]