ಮಂಗಳೂರು ತಾಲೂಕಿನಲ್ಲಿ ನ. 1ರಿಂದ ಪ್ಲಾಸ್ತಿಕ್ ನಿಷೇಧ

Friday, October 12th, 2012
Dr N S Channappa Gowda.

ಮಂಗಳೂರು : ಪ್ಲಾಸ್ಟಿಕ್  ಹಾವಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಹಂತಹಂತವಾಗಿ ಪ್ಲಾಸ್ಟಿಕ್‌ ನಿಷೇಧ ಜಾರಿಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಡಾ| ಎನ್‌. ಎಸ್‌. ಚನ್ನಪ್ಪಗೌಡ ಅವರು ವಿವಿಧ ಸಂಘಟನೆಗಳು ಹಾಗೂ ಅಧಿಕಾರಿಗಳ ಸಭೆಯನ್ನುದ್ದೇಶಿಸಿ  ಗುರುವಾರ  ಮಾತನಾಡಿದ  ಅವರು ನವೆಂಬರ್ ೧ರಿಂದ ಪ್ಲಾಸ್ಟಿಕ್‌ ನಿಷೇದ ಮಂಗಳೂರು ನಗರ, ತಾಲೂಕಿನಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದರು.  ಜಿಲ್ಲೆಯ ನಾಗರಿಕರ ಸಹಕಾರ ಪ್ಲಾಸ್ಟಿಕ್‌ ಹಾವಳಿಯನ್ನು ನಿಷೇಧಿಸಲು ಅಗತ್ಯವಿದೆ ಎಂದರು. ನಿಷೇಧವನ್ನು ಅನುಷ್ಠಾನಕ್ಕೆ ತರುವಲ್ಲಿ ಜಿಲ್ಲೆಯ ಆಡಳಿತದ ಸಹಕಾರ ಅಗತ್ಯವಿದೆ. […]