ಕೃಷಿ ಅಧ್ಯಯನಕ್ಕೆಂದು ಬಂದ ಯುವತಿ ನೀರಿನಲ್ಲಿ ಮುಳುಗಿ ದುರಂತ ಅಂತ್ಯ

Thursday, September 16th, 2021
Maiji

ಮಂಗಳೂರು: ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ಗೆ ಹೋಗಿದ್ದ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದಲ್ಲಿ ನಡೆದಿದೆ. ಡಾ.ಮೈಜೀ ಕರೋಲ್ ಫರ್ನಾಂಡೀಸ್ (31) ಮೃತ ಯುವತಿ. ಆಕೆ ಫಾರ್ಮ್ ಹೌಸ್ನ ಹೊಂಡದಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಕೃಷಿ ಅಧ್ಯಯನಕ್ಕೆಂದು ಕೇಪು ಗ್ರಾಮದ ವಾರಾಣಸಿ ಫಾರ್ಮ್ ಹೌಸ್ಗೆ ಮೈಜಿ ಆಗಮಿಸಿದ್ದರು. ಈ ವೇಳೆ ಫಾರ್ಮ್ ಹೌಸ್ನಲ್ಲಿ ನೀರಿನ ಹೊಂಡ ನೋಡಿದ ಮೈಜೀಗೆ ಈಜಲು ಮನಸಾಗಿದೆ. ತಕ್ಷಣ ಸ್ವಿಮ್ಮಿಂಗ್ ಡ್ರೆಸ್ ಧರಿಸಿ ಆಸೆಯಿಂದ ನೀರಿಗೆ ಇಳಿದಿದ್ದಾಳೆ. […]

ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ

Saturday, September 11th, 2021
R ashoka

ಬೆಂಗಳೂರು  : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು […]