ಕುಂಟಿಕಾನ ದ ಬಳಿ ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರಾವೆಲರ್ ಕಳ್ಳತನ, ಮೂವರ ಬಂಧನ

Saturday, September 23rd, 2023
ಕುಂಟಿಕಾನ ದ ಬಳಿ ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರಾವೆಲರ್ ಕಳ್ಳತನ, ಮೂವರ ಬಂಧನ

ಮಂಗಳೂರು: ಮಂಗಳೂರಿನ ಕುಂಟಿಕಾನ ಫ್ಲೈಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ವಾಹನವನ್ನು ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಬೆಳಗಾವಿಯಲ್ಲಿ ಪತ್ತೆ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊರ ರಾಜ್ಯದ ನಿವಾಸಿಗಳಾದ ಅರೀಫ್ ಉಲ್ಲಾಖಾನ್ ಯಾನೆ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ ಮತ್ತು ಸುರೇಂದ್ರ ಕುಮಾರ್ ಬಂಧಿತ ಆರೋಪಿಗಳು. ಟೆಂಪೋ ಟ್ರಾವೆಲರ್ ಸೆ. 14 ರಂದು ರಾತ್ರಿ ಕಳವಾಗಿದ್ದು ಸುಮಾರಾಕ್ 15 ಲಕ್ಷ ರೂ. ಮೌಲ್ಯದ್ದಾಗಿತ್ತು ಈ ಬಗ್ಗೆ ಉರ್ವ ಠಾಣೆಯಲ್ಲಿ […]

ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

Wednesday, September 15th, 2021
ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದ್ದು, ಅಂದಾಜು ರೂಪಾಯಿ 34.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿರುವ ಈ ಕಾಮಗಾರಿಗೆ ಅನುಮೋದನೆ ನೀಡಿದ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು […]

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದ ಹೊಸ ಕಾರು, ಸವಾರ ಗಂಭೀರ ಗಾಯ

Thursday, May 27th, 2021
Pumpwell-Accident

ಮಂಗಳೂರು : ಇನ್ನೂ ನೋಂದಣಿ ಗೊಳ್ಳದ ಹೊಸ ಕಾರೊಂದು  ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ರಸ್ತೆಯಲ್ಲಿ ಪಲ್ಟಿ ಹೊಡೆದ ಘಟನೆ ನಗರದ ಪಂಪ್ ವೆಲ್ ನಲ್ಲಿರುವ ಫ್ಲೈಓವರ್ ನಲ್ಲಿ ಗುರುವಾರ  ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಕಾರು ಹಿಂದುಗಡೆಯಿಂದ ಬಂದು ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ […]

ಮಂಗಳೂರು: ಟೋಲ್ ನಲ್ಲಿ ಇನ್ನು ಸುಂಕ ಕೊಡಬೇಕಾಗಿಲ್ಲ, ನಳಿನ್ ಭರವಸೆ

Thursday, January 2nd, 2020
bjp Protest

ಮಂಗಳೂರು: ನಿಗದಿತ ಸಮಯದಲ್ಲಿ ಪಂಪ್ವೆಲ್ ಫ್ಲೈ ಓವರ್ ಕಾಮಗಾರಿ ಪೂರ್ತಿಯಾಗದ ಹಿನ್ನೆಲೆಯಲ್ಲಿ ಸಂಸದ ನಳಿನ್ ಸೂಚನೆಯಂತೆ ತಲಪಾಡಿ ಟೋಲ್ ಗೇಟ್ ಬಂದ್ ಮಾಡಿ ಬಿಜೆಪಿ ಕಾರ್ಯಕರ್ತರು ಬಿಸಿ ಮುಟ್ಟಿಸಿದ್ದಾರೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸಹಿತ ಪಕ್ಷದ ಮುಖಂಡರು ನವಯುಗ ಮತ್ತು ಟೋಲ್ ಗೇಟ್ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ್ರು. ಬಳಿಕ ಶಾಸಕರು ನೀವಾಗಿಯೇ ಬಂದ್ ಮಾಡಿದ್ರೆ ಉತ್ತಮ, ಇಲ್ಲವಾದರೆ ನಾವೇ ಬಂದ್ ಮಾಡ್ತೇವೆ ಅಂತ […]