ಕೊಟ್ಟಾರ ಸಮೀಪ ಬಂಗ್ರಕೂಳೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದ ಬಸ್, ತಪ್ಪಿದ ಅನಾಹುತ

Tuesday, May 28th, 2013
bus skids Bangrakulur

ಮಂಗಳೂರು : ಮಂಗಳವಾರ ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕೊಟ್ಟಾರ ಸಮೀಪದ ಬಂಗ್ರಕೂಳೂರು ಬಳಿಯ ಕಿರು ಸೇತುವೆಯ ತಡೆಗೋಡೆಗೆ ಹೊಡೆದು ನಿಂತ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಮಂಗಳೂರಿನ ಕೂಳೂರು ಸಮೀಪಿಸುತ್ತಿದ್ದಂತೆ ಬಸ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು, ಬಸ್ ನ ಸ್ಟೀರಿಂಗ್ ವ್ಹೀಲ್ ತುಂಡಾಗಿದೆ. ಚಾಲಕ ಬಸ್ ನ್ನು ನಿಧಾನವಾಗಿ ಚಲಾಯಿಸಿಕೊಂಡು ಬಂದರೂ ಬಂಗ್ರಕೂಳೂರು ಸಮೀಪ  ಸುರಿದ ಮಳೆಯಿಂದಾಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್  ಕಿರು […]

ಮಂಗಳೂರಿನ ಬಂಗ್ರಕೂಳೂರು ಕಾವೂರಿನ ಮಾಲಾಡಿ ಕೋರ್ಟ್‌ನಲ್ಲಿ ವೈಭವದಿಂದ ನಡೆದ ತಿರುಪತಿ ಶ್ರೀನಿವಾಸ ಕಲ್ಯಾಣೋತ್ಸವ

Wednesday, February 13th, 2013
Srinivasa Kalyanotsava

ಮಂಗಳೂರು : ತಿರುಮಲ ತಿರುಪತಿ ದೇವಸ್ಥಾನ ಹಾಗೂ ಮಂಗಳೂರಿನ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ತಿರುಪತಿ ಶ್ರೀನಿವಾಸ ಕಲ್ಯಾಣೋತ್ಸವವು ಮಂಗಳವಾರ ಸಂಜೆ ಬಂಗ್ರಕೂಳೂರು ಕಾವೂರಿನ ಮಾಲಾಡಿ ಕೋರ್ಟ್‌ನಲ್ಲಿ ನಡೆಯಿತು. ದ.ಕ. ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ಮಾಲಾಡಿ ಕೋರ್ಟ್‌ನಲ್ಲಿ ತಿರುಪತಿ ದೇವಸ್ಥಾನದ ನೇರ ವ್ಯವಸ್ಥೆಯಲ್ಲಿ ಶ್ರೀದೇವಿ ಭೂದೇವಿ ಸಹಿತ ಶ್ರೀ ಶ್ರೀನಿವಾಸ ದೇವರಿಗೆ ಕಲ್ಯಾಣೋತ್ಸವ ನೆರವೇರಿತು. ಇದಕ್ಕೂ ಮೊದಲು ಮಂಗಳವಾರ ಬೆಳಗ್ಗೆ ಏಳುಮಲೆ ಬೆಟ್ಟದ ಒಡೆಯ ಶ್ರೀನಿವಾಸ ದೇವರ ಪುರಪ್ರವೇಶ ಬಂಟ್ಸ್‌ ಹಾಸ್ಟೆಲ್‌ನಲ್ಲಿ ನಡೆದಿತ್ತು. ಅಲ್ಲಿಂದ […]