ತುಳು ಚಿತ್ರ ನಟನಿಂದ ಬಂಟ್ವಾಳ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ

Monday, June 11th, 2018
surendra Bantwala

ಮಂಗಳೂರು :  ಬಿಜೆಪಿ ಕಾರ್ಯಕರ್ತರ ಮೇಲೆ ಚಿತ್ರ ನಟ ಸುರೇಂದ್ರ ಬಂಟ್ವಾಳ ತಲವಾರು ಬೀಸಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಸಮೀಪದ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತರಾದ ಗಣೇಶ್ ಮತ್ತು ಪುಷ್ಪರಾಜ್ ಅವರ ಮೇಲೆ ತಲವಾರ್‌ ಬೀಸಿದ್ದು, ಇದರಿಂದ ಗಾಯಗೊಂಡ ಅವರು ಚಿಕಿತ್ಸೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಆರೋಪಿ ಸುರೇಂದ್ರ ಬಂಟ್ವಾಳ ತಲೆಮರೆಸಿಕೊಂಡಿದ್ದಾನೆ. ಸೋಮವಾರ ಮಧ್ಯಾಹ್ನ ಸುಮಾರು ಒಂದು ಗಂಟೆಯ ವೇಳೆಗೆ ಬಿಜೆಪಿ ಕಾರ್ಯಕರ್ತರಾದ ಗಣೇಶ್, ಚರಣ್, ಪುಷ್ಪರಾಜ್ , ಮತ್ತಿತರರು ಬಡ್ಡಕಟ್ಟೆ […]