ಭಾರತೀಯ ನೌಕಾಪಡೆ ಹೆಲಿಕಾಪ್ಟರ್‌ನಲ್ಲಿ ದಿಢೀರ್‌ ಬೆಂಕಿ ತಪ್ಪಿದ ಅನಾಹುತ

Tuesday, December 13th, 2011
ಭಾರತೀಯ ನೌಕಾಪಡೆ ಹೆಲಿಕಾಪ್ಟರ್‌ನಲ್ಲಿ ದಿಢೀರ್‌ ಬೆಂಕಿ ತಪ್ಪಿದ ಅನಾಹುತ

ಮಂಗಳೂರು : ಬಜಪೆಯ ಹಳೆಯ ವಿಮಾನ ನಿಲ್ದಾಣದಲ್ಲಿ ಭಾರತೀಯ ನೌಕಾಪಡೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ದಿಢೀರ್‌ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಬೆಳಗ್ಗೆ ನಡೆಯಿತು. ಕೊಚ್ಚಿಯ ಗರುಡ ನೌಕೆಯಿಂದ ಹೊರಟ ಹೆಲಿಕಾಪ್ಟರ್‌ ಇಂಧನ ತುಂಬಿಸಿಕೊಳ್ಳಲು ಬೆಳಗ್ಗೆ 10.45ರ ವೇಳೆ ಬಜಪೆ ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ನಿಲುಗಡೆಗೊಂಡಿದ್ದ ಕಾಪ್ಟರ್‌ನ ರೋಟಾರ್ ಬಳಿ 10.56ರ ವೇಳೆ ಹೊಗೆ ಚಿಮ್ಮುತ್ತಿದ್ದು ಇದೇ ವೇಳೆ ಬೆಂಕಿಯೂ ಕಾಣಿಸಿಕೊಂಡಿತು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಗ್ನಿಶಾಮಕ ಸಿಬಂದಿ ಕಾಪ್ಟರ್‌ನ ಸಿಬಂದಿಗಳ ಸಹಕಾರದಿಂದ ಅಗ್ನಿಶಮನ […]

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಬಜಪೆ ವಿಮಾನ ನಿಲ್ದಾಣಕ್ಕೆ ವೋಲ್ವೊ ಬಸ್‌ಗಳ ಓಡಾಟಕ್ಕೆ ಅನುಮತಿ

Friday, July 29th, 2011
KSRTC-volvo

ಮಂಗಳೂರು : ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಬಜಪೆ ವಿಮಾನ ನಿಲ್ದಾಣಕ್ಕೆ ವೋಲ್ವೊ ಹವಾನಿಯತ್ರಿತ ಬಸ್‌ಗಳ ಓಡಾಟಕ್ಕೆ ಬುಧವಾರ ದ.ಕ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೆಂಟ್ರಲ್ ರೈಲು ನಿಲ್ದಾಣದವರೆಗೆ ಕಾವೂರು, ಬಜ್ಪೆ, ಕೆಎಸ್ಸಾರ್ಟಿಸಿ, ಲಾಲ್ ಬಾಗ್, ಜ್ಯೋತಿ, ಸೆಂಟ್ರಲ್ ರೈಲು ನಿಲ್ದಾಣ, ಕೆ.ಎಸ್.ರಾವ್ ರೋಡ್, ಪಿವಿಎಸ್ ಸರ್ಕಲ್, ಬಂಟ್ಸ್ ಹಾಸ್ಟೆಲ್ ಸರ್ಕಲ್, ಜ್ಯೋತಿ, ಸೈಂಟ್ ಆಗ್ನೆಸ್, ಮಲ್ಲಿಕಟ್ಟೆ, ನಂತೂರು, ಕೆಪಿಟಿ, ಕಾವೂರು, ಬೊಂದೇಲ್ ಮಾರ್ಗವಾಗಿ ಕೆಎಸ್ಸಾರ್ಟಿಸಿ ಅಥವಾ ಯಾವುದೇ ಖಾಸಗಿ ಹವಾನಿಯಂತ್ರಿತ ಎರಡು […]