ಬಡವರು, ಕಾರ್ಮಿಕರಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

Thursday, May 27th, 2021
street-vendors

ಬೆಂಗಳೂರು : ಬೀದಿ ಬದಿ ವ್ಯಾಪಾರಿಗಳಿಗೆ, ಮೆಟ್ರೋ ನಿರ್ಮಾಣ ಕಾರ್ಮಿಕರಿಗೆ ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ವಿವಿಧ ಭಾಗಗಳಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,”ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚಿನ ಜನ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸೋಂಕಿನ ವಿರುದ್ಧದ ಹೋರಾಟವನ್ನ ಮತ್ತಷ್ಟು ಪರಿಣಾಮಕಾರಿಯಾಗಿಸಲು ಲಸಿಕೆ ನೀಡುವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಮುಂಚೂಣಿಯ ಕಾರ್ಯಕರ್ತರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. […]

ಕೇಂದ್ರದ ಪ್ಯಾಕೇಜ್ ಗಳನ್ನು ರಾಜ್ಯ ಸರ್ಕಾರ ಯಾಕೆ ನೀಡುತ್ತಿಲ್ಲ, ನಿಮ್ಮ ಮಂತ್ರಿಗಳು ಕತ್ತೆ ಕಾಯುತ್ತಿದ್ದಾರಾ? ಸದಾನಂದ ಗೌಡ

Friday, May 14th, 2021
Sadananda Gowda Call

ಮಂಗಳೂರು : ಕೇರಳ, ಆಂಧ್ರದಲ್ಲಿ ಬಡವರಿಗೆ ಪ್ಯಾಕೇಜ್ ಘೋಷಣೆ ಆಗಿ, ಅದರ ಉಪಯೋಗವನ್ನು ಬಡವರು ಪಡೆದುಕೊಳ್ಳುತ್ತಿದ್ದಾರೆ, ಆದರೆ ಕರ್ನಾಟಕದಲ್ಲಿ ಪ್ಯಾಕೇಜ್ ಘೋಷಣೆ ಯಾಕೆ ಆಗಲಿಲ್ಲ? ದಯವಿಟ್ಟು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದಕ್ಕೆ ಕೇಂದ್ರ ಸಚಿವ ಸದಾನಂದ ಗೌಡರು ಕೇಂದ್ರದಿಂದ ಕೊಡಬೇಕಾದುದನ್ನೆಲ್ಲ ಕೊಟ್ಟಿದ್ದೇವೆ ರಾಜ್ಯದ ಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ರೈ ಎಂದು ಪರಿಚಯಿಸಿಕೊಂಡು ಪೋನ್ ಕರೆ ಮಾಡಿ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು […]