ಬಡ್ಡಿಯವನಿಂದ ಸಾಲಪಡೆದು ಕಿರುಕುಳ ತಾಳಲಾರದೆ ಮಹಿಳೆ ಮನೆಯಲ್ಲೇ ಆತ್ಮಹತ್ಯೆ

Saturday, June 12th, 2021
Gowramma

ಶಿವಮೊಗ್ಗ: ಬಡ್ಡಿಯವನಿಂದ ಸಾಲಪಡೆದು  ಮರು ಪಾವತಿಸಿದರೂ  ಕಿರುಕುಳ ತಾಳಲಾರದೆ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಿದ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೌರಮ್ಮ (55) ಎಂದು ಗುರುತಿಸಲಾಗಿದೆ. ಗೌರಮ್ಮ ಪತಿ ಮಲ್ಲಿಕಾರ್ಜುನಪ್ಪ ಇದೇ ಗ್ರಾಮದ ಲಂಕೇಶ್ ನಾಯ್ಕ್ ನಿಂದ 10 ರೂ. ಬಡ್ಡಿಯಂತೆ 20 ಸಾವಿರ ರೂ ಸಾಲ ಪಡೆದಿದ್ದರು. ಈ 20 ಸಾವಿರ ರೂ. ಹಣ ನೀಡುವಾಗ ಲಂಕೇಶ್ ನಾಯ್ಕ ಬಡ್ಡಿಯ ಹಣ 2 ಸಾವಿರ ಕಡಿತಗೊಳಿಸಿ ಕೊಟ್ಟಿದ್ದನಂತೆ. ಬಡ್ಡಿ ಕೊಟ್ಟ […]