ಜಿಲ್ಲಾ ಉಸ್ತುವಾರಿ ಸಚಿವರು ಸಿಎಂ ಸಿದ್ದರಾಮಯ್ಯನವರಂತೆ ನಿದ್ದೆ ಮಾಡುತ್ತಿದ್ದಾರೆ

Wednesday, May 17th, 2017
bjp

ಮಂಗಳೂರು:  ಮಂಗಳೂರು ಮತ್ತು ಬಂಟ್ವಾಳವನ್ನು ಬರ ಪೀಡಿತ ತಾಲೂಕುಗಳಾಗಿ ಘೋಷಿಸಿರುವ ಸರಕಾರ ಅದಕ್ಕೆ ಏನನ್ನೂ ಮಾಡಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರು ಸಿಎಂ ಸಿದ್ದರಾಮಯ್ಯನವರಂತೆ ನಿದ್ದೆ ಮಾಡುತ್ತಿದ್ದಾರೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಮಠಂದೂರು, ಬರ ಪರಿಹಾರಕ್ಕೆ ತುರ್ತಾಗಿ ಸ್ಪಂದಿಸಿ ಪರಿಹಾರ ನೀಡಬೇಕಾದವರು ವ್ಯರ್ಥ ಕಾಲಹರಣ ಮಾಡಿ ನಿದ್ದೆ ಮಾಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆ ವೇಳೆ ತಾನು ನೀಡಿದ ಭರವಸೆಗಳನ್ನು ಮರೆತು ಭ್ರಷ್ಟಾಚಾರ, ನಿರ್ಲಕ್ಷ್ಯ […]