ಬಸ್ ಮಾಲಕರಿಂದ ಪ್ರಯಾಣಿಕರ ಮೇಲೆ ಟೋಲ್ ಸೆಸ್ ಹೇರಿಕೆ, ಹೋರಾಟ ಸಮಿತಿ ವಿರೋಧ

Monday, February 17th, 2020
tolgate

ಮಂಗಳೂರು : ಫಾಸ್ಟ್ ಟಾಗ್ ಕಡ್ಡಾಯ, ಟೋಲ್ ದರಗಳ ಹೆಚ್ಚಳವನ್ನು ಮುಂದಿಟ್ಟು ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಬಸ್ ಮಾಲಕರು ಪ್ರತಿ ಸ್ಟೇಜ್ ಗೆ ಟಿಕೇಟ್ ಮೇಲೆ ತಲಾ ಒಂದು ರೂಪಾಯಿ ಪ್ರಯಾಣ ದರ ಹೆಚ್ಚಳ ಮಾಡಿರುವುದು ಖಂಡನೀಯ. ಜಿಲ್ಲಾಡಳಿತ, ಆರ್ ಟಿ ಎ ಅನುಮತಿ ಪಡೆಯದೆ ಈ ರೀತಿ ಏಕಪಕ್ಷೀಯ, ನಿಯಮ ಬಾಹಿರ ಏರಿಕೆ ಮಾಡುವುದನ್ನು ಒಪ್ಪಲಾಗದು, ಉಭಯ ಜಿಲ್ಲಾಡಳಿತಗಳು ತಕ್ಷಣ ಮಧ್ಯ ಪ್ರವೇಶಿಸಿ ದರ ಏರಿಕೆಯನ್ನು ತಡೆ ಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು […]

ಭೀಕರ ಅಪಘಾತ ಬಸ್ ಗೆ ಢಿಕ್ಕಿ ಹೊಡೆದ ಟ್ರಕ್ : 13 ಜನರು ಮೃತ್ಯು, 31 ಮಂದಿ ಗಂಭೀರ

Thursday, February 13th, 2020
uttara-pradesha

ಉತ್ತರಪ್ರದೇಶ : ಆಗ್ರಾ -ಲಕ್ನೋ ಹೆದ್ದಾರಿಯಲ್ಲಿ ಟ್ರಕ್ ಒಂದು ಬಸ್ ಗೆ ಢಿಕ್ಕಿ ಹೊಡೆದ ತೀವ್ರತೆಗೆ 13 ಜನರು ದಾರುಣವಾಗಿ ಸಾವನ್ನಪ್ಪಿ 31 ಜನರು ಗಂಭೀರ ಗಾಯಗೊಂಡ ಘಟನೆ ಫಿರೋಜಾಬಾದ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಗಾಯಗೊಂಡ ವ್ಯಕ್ತಿಗಳನ್ನು ಇತವಾಹಹ್ ನಲ್ಲಿರುವ ಸೈಫೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ 10 ಗಂಟೆಯ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು ಸಾವೀನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ, ದೆಹಲಿಯಿಂದ ಮೊತಿರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್ […]

ಬೆಂಗಳೂರು : ಪೆಟ್ರೋಲ್​ ಬಂಕ್​ನಲ್ಲಿ ನಡುರಾತ್ರಿ ಹೊತ್ತಿ ಉರಿದ ಬಸ್; ತಪ್ಪಿದ ಭಾರೀ ಅನಾಹುತ

Thursday, January 30th, 2020
benki

ಬೆಂಗಳೂರು : ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ. ಬುಧವಾರ ನಡುರಾತ್ರಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರೆಲ್ಲರೂ ಆತುರಾತುರವಾಗಿ ಕೆಳಗೆ ಇಳಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. 34 ಜನರು ಪ್ರಯಾಣಿಸುತ್ತಿದ್ದ ಎಂಎಸ್ಎಸ್ ಎಂಬ ಖಾಸಗಿ ಬಸ್ ಬೆಂಗಳೂರಿನಿಂದ ಕೊಯಮತ್ತೂರಿಗೆ ಹೊರಟಿತ್ತು. ಬುಧವಾರ ರಾತ್ರಿ 11 ಗಂಟೆಗೆ ಮಡಿವಾಳದ ಭಾರತ್ ಪೆಟ್ರೋಲ್ ಬಂಕ್ಗೆ ಡೀಸೆಲ್ ಹಾಕಿಸಿಕೊಳ್ಳಲು ಬಂದಿದ್ದ ಚಾಲಕ ಬಸ್ ಸ್ಟಾರ್ಟ್ ಮಾಡುತ್ತಿದ್ದಂತೆ ಇಂಜಿನ್ನಲ್ಲಿ ಬೆಂಕಿ […]

ಕೊಡಗಿನ ಕುಲದೇವಿಯ ದರ್ಶನ ಪಡೆಯಲು ಬರುವವರಿಗೆ ಬಸ್ ವ್ಯವಸ್ಥೆಯೇ ಇಲ್ಲ : ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಭಕ್ತರ ಅಸಮಾಧಾನ

Monday, January 20th, 2020
talakaveri

ಮಡಿಕೇರಿ : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಹಾಗೂ ಭಕ್ತರು ಒತ್ತಾಯಿಸಿದ್ದಾರೆ. ಭಕ್ತಿಯ ಕ್ಷೇತ್ರವಾಗಿರುವ ತಲಕಾವೇರಿಗೆ ರಾಜ್ಯ ಮತ್ತು ಹೊರ ರಾಜ್ಯದಿಂದ ಪ್ರತಿದಿನ ಸಾವಿರಾರು ಭಕ್ತರು ಬಂದು, ಹೋಗುತ್ತಾರೆ. ಆದರೆ ಭಕ್ತರ ಅನುಕೂಲಕ್ಕಾಗಿ ಯಾವುದೇ ಬಸ್ ವ್ಯವಸ್ಥೆಗಳಿಲ್ಲ. ಬೆಳಗ್ಗೆ 7.30ರಿಂದ 8.30ರ ಅವಧಿಯಲ್ಲಿ ಒಂದು ಖಾಸಗಿ ಮತ್ತು ಒಂದು ಕೆಎಸ್‌ಆರ್‌ಟಿಸಿ ಬಸ್ ಮಾತ್ರ ತಲಕಾವೇರಿಗೆ ತೆರಳುತ್ತದೆ. ಆ ನಂತರ ಯಾವುದೇ ಬಸ್‌ಗಳ ಸಂಚಾರ ಇರುವುದಿಲ್ಲ, ಇದರಿಂದ ಭಕ್ತರು […]

ಚೀನಾದ ಶಾಂಘೈನಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆ ಕುಸಿದ ರಸ್ತೆ : ಹತ್ತು ಪ್ರಯಾಣಿಕರು ನಾಪತ್ತೆ

Tuesday, January 14th, 2020
china

ಶಾಂಘೈ : ಬಸ್ಸೊಂದು ಸಂಚರಿಸುತ್ತಿದ್ದ ವೇಳೆಯೇ ರಸ್ತೆ ಕುಸಿದು ಹೋದ ಪರಿಣಾಮ ಬಸ್ ನಲ್ಲಿದ್ದ ಕನಿಷ್ಠ ಹತ್ತು ಪ್ರಯಾಣಿಕರು ನಾಪತ್ತೆಯಾದ ಘಟನೆ ಚೀನಾದ ಶಾಂಘೈನಲ್ಲಿ ನಡೆದಿದೆ. ಈ ಅವಗಢ ಸೋಮವಾರ ಸಂಜೆಯ ವೇಳೆಗೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗ್ರೇಟ್ ವಾಲ್ ಆಸ್ಪತ್ರೆಗೆ ಮುಂಭಾಗದಲ್ಲಿ ರಸ್ತೆಯ ಒಂದು ಭಾಗ ಕುಸಿದು ಕಂದಕ ಉಂಟಾಗಿದೆ. ಅದೇ ವೇಳೆ ಅಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕ ಸಂಸ್ಥೆಯ ಬಸ್ ಅದರೊಳಗೆ ಬಿದ್ದಿದೆ. ಬಸ್ ಬಿದ್ದ ರಭಸಕ್ಕೆ ಅದು ಸ್ಫೋಟಗೊಂಡಿದೆ ಎಂದು […]

ಬಸ್, ಸ್ಕೂಟರ್ ನಡುವೆ ಡಿಕ್ಕಿ : ಮಗು ಸ್ಥಳದಲ್ಲೇ ಸಾವು

Tuesday, December 17th, 2019
Pratwi

ಮಡಿಕೇರಿ : ಕೆಎಸ್ ಆರ್ ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಮೂರು ವರ್ಷದ ಗಂಡು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಬೈಚೇನಹಳ್ಳಿಯಲ್ಲಿ ನಡೆದಿದೆ. ಗೊಂದಿಬಸವನಹಳ್ಳಿ ನಿವಾಸಿಗಳಾದ ಪರಮೇಶ್ವರ ಹಾಗೂ ಗೀತಾ ದಂಪತಿಗಳ ಪುತ್ರ ಪ್ರಥ್ವಿ (3) ಮೃತ ದುರ್ದೈವಿ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಬಸ್ ದೇವಾಲಯದಿಂದ ಮರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಪ್ರಥ್ವಿ ಮೇಲೆ ಬಸ್ ಚಕ್ರ ಹರಿದು ಸಾವು ಸಂಭವಿಸಿದೆ. ಕುಶಾಲನಗರ ಪೊಲೀಸರು […]

ಕುಡ್ಲೂರು ಬಸ್ ಗಳ ನಡುವೆ ಅಪಘಾತ : ಬಸ್ ಚಾಲಕ ಸಾವು, 20 ಮಂದಿಗೆ ಗಾಯ

Thursday, September 5th, 2019
KSRTC

ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಹಾಗೂ‌ ಎಸ್ ಆರ್ ಎಸ್ ಖಾಸಗಿ‌ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕೆಎಸ್ಆರ್ ಟಿಸಿ ಬಸ್ ಚಾಲಕ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಡ್ಲೂರು ಸಮೀಪ‌ ಶಿವಮೊಗ್ಗ -ಬೆಂಗಳೂರು ರಾಷ್ಟ್ರೀಯ‌ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕೆಎಸ್ ಆರ್ ಟಿಸಿ ಬಸ್ ತೆರಳುತ್ತಿತ್ತು. ಖಾಸಗಿ ಬಸ್ ನಲ್ಲಿ ಸಿಲುಕಿದ್ದ ಚಾಲಕನನ್ನು ಹರಸಾಹಸ ಪಟ್ಟು ಸ್ಥಳೀಯರು ಹೊರತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು […]

ಮಂಗಳೂರು : ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಿದ ಆರೋಪ; ಚಾಲಕನಿಗೆ ದಂಡ

Tuesday, August 20th, 2019
Sandesh-naik

ಮಂಗಳೂರು : ಬಸ್ ಚಾಲನೆ ವೇಳೆ ಮೊಬೈಲ್ ಪೋನ್ ಬಳಸುತ್ತಿದ್ದ ಬಸ್ ಚಾಲಕನ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಆತನ ಮೇಲೆ ಮಂಗಳೂರು ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. ಸಂದೇಶ್ ನಾಯ್ಕ್ ಬಸ್ ಚಾಲಕನಾಗಿದ್ದು, ಕಾರ್ಕಳ, ಮೂಡುಬಿದಿರೆಯಿಂದ ಮಂಗಳೂರಿಗೆ ಸಾಗುವ ಈ ಬಸ್ ಚಲಾಯಿಸಿಕೊಂಡು ಹೋಗುವ ವೇಳೆ ಚಾಲಕ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದನು, ಈ ಬಗ್ಗೆ ಪ್ರಯಾಣಿಕರು ಮಾತನಾಡಿದಾಗ ಆತ ಬೇಜಾವ್ದಾರಿಯಿಂದ ಉತ್ತರ ನೀಡಿದ್ದಾನೆ ಎನ್ನಲಾಗಿದೆ. ಇನ್ನೂ ರಸ್ತೆಯ ತಿರುವುಗಳಲ್ಲಿಯೂ ಕೂಡ ಈತ ಪೋನ್ […]

ಪಾಂಡವಪುರ ಬಳಿ ನಾಲೆಗೆ ಉರುಳಿದ ಖಾಸಗಿ ಬಸ್: 20ಕ್ಕೂ ಹೆಚ್ಚು ಮಂದಿ ಸಾವು

Saturday, November 24th, 2018
mandya-2

ಮಂಡ್ಯ: ಪಾಂಡವಪುರ ಸಮೀಪದ ಕನಗನಮರಡಿ ಗ್ರಾಮದ ಸಮೀಪದ ವಿಸಿ ನಾಲೆಗೆ ಖಾಸಗಿ ಬಸ್‌ವೊಂದು ಉರುಳಿದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 15 ಶವಗಳನ್ನು ಸ್ಥಳೀಯರು ಹಗ್ಗದ ನೆರವಿನಿಂದ ಹೊರ ತೆಗೆದಿದ್ದಾರೆ. ಮಧ್ಯಾಹ್ನ 12.30 ಸುಮಾರಿನಲ್ಲಿ ಈ ಘಟನೆ ನಡೆದಿದೆ. ನಾಲೆಯ ನೀರಿನಲ್ಲಿ ಬಸ್ ಸಂಪೂರ್ಣವಾಗಿ ಮುಳುಗಿರುವುದರಿಂದ ಅದರಲ್ಲಿದ್ದವನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಬಸ್‌ನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎನ್ನ‌ಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಬಸ್‌ ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿತ್ತು. ನಾಲೆ […]

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ..ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವು!

Wednesday, July 25th, 2018
student

ಶಿರಸಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರಸಿ- ಹುಬ್ಬಳ್ಳಿ ರಸ್ತೆಯ ಚಿಪ್ಗಿಯಲ್ಲಿ ನಡೆದಿದೆ. ಚಿಪ್ಗಿಯ ಚೆಕ್ ಪೋಸ್ಟ್ ಘಟನೆ ನಡೆದಿದ್ದು, ಕುಮಟಾ-ಶಿರಸಿ ಹುಬ್ಬಳ್ಳಿ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಬಾಲಕಿಯ ದೇಹ ಸಂಪೂರ್ಣ ಛಿದ್ರಗೊಂಡಿದೆ. ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.