ಸರಕಾರೀ ಬಸ್ಸಲ್ಲಿ ಕೋಳಿಗೂ ಟಿಕೆಟ್ ವಿಧಿಸಿದ ಕಂಡಕ್ಟರ್

Wednesday, September 1st, 2021
chicken-ticket

ಚಿಕ್ಕಬಳ್ಳಾಪುರ : ಕೆಎಸ್‌ಆರ್‌ಟಿಸಿ ಬಸ್‌ನ ಕಂಡಕ್ಟರ್ ಪ್ರಯಾಣಿಕರೊಬ್ಬರು ಕೋಂಡೊಯ್ಯುತ್ತಿದ್ದ ಕೋಳಿಗೂ ಟಿಕೆಟ್ ವಿಧಿಸಿದರು. ಪ್ರಯಾಣಿಕರಿಗೆ ಅನ್ವಯವಾಗುವ ದರವನ್ನು ಕೋಳಿಗೂ ವಿಧಿಸಿದರು. ಈ ವಿಷಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಗುರೇಬಂಡೆ ತಾಲೂಕಿನ ಸೋಮೇಶ್ವರಕ್ಕೆ ಪೆರೇಸಂದ್ರದಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೋಗುತ್ತಿದ್ದರು. ಅವನ ಕೈಯಲ್ಲಿ ಸ್ಥಳೀಯ ತಳಿಯ ಕೋಳಿ ಕೂಡ ಇತ್ತು. ಕೋಳಿಗೆ ಸಂಬಂಧಿಸಿದಂತೆ ಕಂಡಕ್ಟರ್ ಐದು ರೂಪಾಯಿ ಟಿಕೆಟ್ ನೀಡಿದರು. ಟಿಕೆಟ್ ಪಡೆದ ಮಾಲೀಕರು ಕೋಳಿ ಯನ್ನು ಸೀಟಿನ ಮೇಲೆ ಕೂರಿಸಿದರು. ಆ ಸೀಟನ್ನು ಬಿಟ್ಟು […]

ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ, ಬಸ್‌‌‌ ಕಂಡಕ್ಟರ್‌ ಪೊಲೀಸ್ ವಶ

Wednesday, October 18th, 2017
ganja

ಮಂಗಳೂರು:  ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡಸಿ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ. ಮೊಹಮ್ಮದ್ ಇಝುದ್ದಿನ್ (32) ಬಂಧಿತ ಆರೋಪಿ. ಕಂಕನಾಡಿ ನಗರ ವ್ಯಾಪ್ತಿಯ ಪಂಪ್ವೆಲ್ ವೃತ್ತ ಬಳಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ವೃತ್ತಿಯಲ್ಲಿ ಬಸ್ ನಿರ್ವಾಹಕನಾಗಿರುವ ಬಂಟ್ವಾಳ ಅಮ್ಮುಂಜೆಯ ಮೊಹಮ್ಮದ್ ಇಝುದ್ದಿನ್‌ನನ್ನು ವಶಕ್ಕೆ ಪಡೆದುಕೊಂಡು ಆತನಿಂದ 200 ಗ್ರಾಂ ಗಾಂಜಾ ಹಾಗೂ ಮೊಬೈಲ್ […]

ಚಿಲ್ಲರೆ ವಿವಾದ ನದಿಗೆ ಹಾರಿದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ

Monday, September 26th, 2016
devadas

ಸುಬ್ರಹ್ಮಣ್ಯ: ಬಸ್‌ನಲ್ಲಿ ಪ್ರಯಾಣಿಸುತಿದ್ದ ಯುವತಿಯೊಬ್ಬಳು ಚಿಲ್ಲರೆ ಹಣ ವಿಚಾರವಾಗಿ ಬಸ್ ಕಂಡಕ್ಟರ್ ಜತೆ ನಡೆಸಿದ ವಿವಾದಕ್ಕೆ ಸಂಬಂದಿಸಿ ಮನನೊಂದ ಬಸ್ ಕಂಡಕ್ಟರ್ ಚಲಿಸುತಿದ್ದ ಬಸ್‌ನಿಂದ ನದಿಗೆ ಹಾರಿದ ಘಟನೆ ರವಿವಾರ ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಸಂಭವಿಸಿದೆ. ಕುಮಾರಧಾರ ನದಿನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಮಂಗಳೂರಿನ ಗುರುಪುರ ಕೈಕಂಬ ದೇವದಾಸ್(41) ಆಗಿದ್ದಾರೆ. ಮಂಗಳೂರು ಸಾರಿಗೆ ಸಂಸ್ಥೆಯ ಒಂದನೆ ಘಟಕಕ್ಕೆ ಸೇರಿದ ಬಸ್‌ನಲ್ಲಿ ದೇವದಾಸ್ ನಿರ್ವಾಹಕ ಕರ್ತವ್ಯದಲ್ಲಿದ್ದ. ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 6.30 ಕ್ಕೆ ಹೊರಟು ಉಪ್ಪಿನಂಗಡಿ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ […]