ಸುರತ್ಕಲ್: ಪ್ರಯಾಣಿಕನ ಜೀವ ಉಳಿಸಲು ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ

Friday, November 20th, 2020
Ganesh

ಮಂಗಳೂರು  : ತನ್ನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಜೀವ ಉಳಿಸಲು ನಿರ್ವಾಹಕನೋರ್ವ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲು ಸ್ವತಹ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ. ಗಣೇಶ್ ಅವರು ಕಳೆದ  ನವಂಬರ್ 16 ರಂದು ಬೆಳಗ್ಗೆ ಎಂದಿನಂತೆ  ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ದಿನ ಪ್ರಯಾಣಿಸುತ್ತಿದ್ದ ಉತ್ತರಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು.ತಕ್ಷಣ ಗಣೇಶ್ […]

ತೊಕ್ಕೊಟ್ಟಿನಲ್ಲಿ ರೈಲು ಢಿಕ್ಕಿ ಹೊಡೆದು ಬಸ್ ನಿರ್ವಾಹಕ ಮೃತ್ಯು

Friday, December 13th, 2019
Rathan

ಮಂಗಳೂರು : ರೈಲು ಢಿಕ್ಕಿ ಹೊಡೆದ ಪರಿಣಾಮ ಬಸ್ ನಿರ್ವಾಹಕನೋರ್ವ ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡುವಿನಲ್ಲಿ ನಡೆದಿದ್ದು ಡಿ.13 ರ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ ಮೃತರನ್ನು ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ. 42 ರೂಟ್ ನಂಬರ್ ಬಸ್ಸಲ್ಲಿ ಕಂಡಕ್ಟರ್ ಆಗಿದ್ದ ರತನ್ ಕುಮಾರ್ ಅವರ ಮೃತದೇಹವು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಬಸ್ ನಿರ್ವಾಹಕ ದೇವದಾಸ್‌ರವರ ನಿವಾಸಕ್ಕೆ ಕೆಎಸ್ಆರ್‌ಟಿಸಿ ವರ್ಕರ್ಸ್‌ ಯೂನಿಯನ್‌ ಪದಾಧಿಕಾರಿಗಳು ಭೇಟಿ

Friday, October 7th, 2016
devadas-home

ಮಂಗಳೂರು: ಯುವತಿಯೊಂದಿಗೆ ಚಿಲ್ಲರೆ ವಿಚಾರದಲ್ಲಿ ನ್ಯಾಯ ಸಿಗದೆ ಅವಮಾನಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಸ್ ನಿರ್ವಾಹಕ ದೇವದಾಸ್‌ರವರ ನಿವಾಸಕ್ಕೆ ಕೆಎಸ್ಆರ್‌ಟಿಸಿ ವರ್ಕರ್ಸ್‌ ಯೂನಿಯನ್‌ ಪದಾಧಿಕಾರಿಗಳು ಮತ್ತು ಆಲಂಕಾರು ವ್ಯಾಪ್ತಿಯ ಸಾಮಾಜಿಕ ಕಾರ್ಯಕರ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆ ದೇವದಾಸ್‌ರವರ ಪತ್ನಿ ಅಂಗನವಾಡಿ ಕಾರ್ಯಕರ್ತೆ ಉಷಾ ತನ್ನ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಮಾಡಿದರು. ನಾವು ಕೇವಲ ಏಳು ಸೆಂಟ್ಸ್ ಜಾಗದಲ್ಲಿ ಸಣ್ಣ ಮನೆ ಮಾಡಿ ಪತಿ ದೇವದಾಸ್‌ರವರ ಸಂಪಾದನೆಯಲ್ಲಿ ನಮ್ಮ ಜೀವನ ಸಾಗಿಸುತ್ತಿದ್ದೆವು. […]