ಸುಳ್ಯ: ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿಡಿಪ್, ಹಿಂದೂ ಸಂಘಟನೆಯ ಆಕ್ರೋಶ

Saturday, September 23rd, 2023
ಸುಳ್ಯ: ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಬಹುಮಾನದ ಲಕ್ಕಿಡಿಪ್, ಹಿಂದೂ ಸಂಘಟನೆಯ ಆಕ್ರೋಶ

ಸುಳ್ಯ: ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಳೆಗೇಟು ಗಣೇಶ ಚತುರ್ಥಿ ಸಂದರ್ಭ ಗಣೇಶ ಹಬ್ಬದ ಹೆಸರಿನಲ್ಲಿ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿತ್ತು. ಈ ಲಕ್ಕಿ ಕೂಪನ್ ಗೆ ಸುಳ್ಯ ಪರಿಸರದಲ್ಲಿ ವಿರೋಧ ವ್ಯಕ್ತವಾಗಿತ್ತು. ಹಿಂದೂ ಧರ್ಮದ ಹಬ್ಬದಲ್ಲಿ ಇಂತಹ ಲಕ್ಕಿ ಕೂಪನ್ ಮಾಡಿದವನ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿತ್ತು. ಇದೀಗ […]

ಇಬ್ಬರು ನಕ್ಸಲ್‍ ವಾದಿಗಳ ಪತ್ತೆಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದ ತನಿಖಾ ಸಂಸ್ಥೆ

Saturday, October 23rd, 2021
naxal

ಕಾರ್ಕಳ : ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್‍ ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ. ಅವರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ […]