ಕೃಷಿಭೂಮಿ ಉಳಿದರೆ ಸಂಸ್ಕೃತಿ ಉಳಿಯುತ್ತದೆ : ಕೊಡಂದೇರ ಬಾಂಡ್ ಗಣಪತಿ ಅಭಿಪ್ರಾಯ

Wednesday, December 25th, 2019
Ponnampete

ಮಡಿಕೇರಿ : ಕೃಷಿ ಸಂಸ್ಕೃತಿ ಹೊಂದಿರುವ ಕೊಡವರು ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹೇಳಿದ್ದಾರೆ. ಪೊನ್ನಂಪೇಟೆ ಕೊಡವ ಸಮಾಜದ ಆಶ್ರಯದಲಿ ಆಯೋಜಿಸಿದ್ದ ಕೊಡವ ಸಾಂಸ್ಕೃತಿಕ ದಿನ ಮತ್ತು ಪುತ್ತರಿಕೋಲ್ ಮಂದ್ ನಮ್ಮೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೃಷಿ ಹಾಗೂ ಈ ಭೂಮಿಯೊಂದಿಗೆ ಕೊಡವರ ಅವಿನಾಭಾವ ಸಂಬಂಧವಿದೆ. […]