ಪತ್ನಿ ಮಕ್ಕಳು ಮತಾಂತರವಾಗುವ ಆತಂಕದಿಂದ ಅವರನ್ನು ಕೊಂದು ನೇಣಿಗೆ ಶರಣಾದ ಡ್ರೈವರ್

Wednesday, December 8th, 2021
morgansgate-suicide

ಮಂಗಳೂರು : ಪತ್ನಿ ಮಕ್ಕಳು  ಮತಾಂತರವಾಗುವ ಆತಂಕದಿಂದ  ಅವರಿಗೆ  ಫ್ರೈಡ್ ರೈಸ್ ನಲ್ಲಿ ವಿಷ ಹಾಕಿ ತಿನ್ನಿಸಿ ಪತಿಯೂ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಮೊರ್ಗನ್ಸ್ ಗೇಟ್ ಗೇಟ್ ನಲ್ಲಿ ಬುಧವಾರ ನಡೆದಿದೆ. ನಾಗೇಶ್ ಶೇರಿಗುಪ್ಪಿ (30),ಆತನ ಪತ್ನಿ ವಿಜಯಲಕ್ಷ್ಮಿ( 26), ಸಪ್ನ (8) ಮತ್ತು ಸಮರ್ಥ್ (4) ಸಾವಿಗೀಡಾದವರು. ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವರಾಗಿದ್ದ ಕುಟುಂಬ ಕಳೆದ ೮ ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿತ್ತು. ನಾಗೇಶ್ ಶೇರಿಗುಪ್ಪ ಬರೆದ  ಡೆತ್ ನೋಟ್ ನಲ್ಲಿ ನೂರ್ […]

ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ರಾಡ್ ನಿಂದ ಹಲ್ಲೆ, ಪತ್ನಿ ಸಾವು, ಪತಿ ಗಂಭೀರ

Sunday, October 18th, 2020
Triveni Vinod

ಕೊಪ್ಪಳ: ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮೇಲೆ ಅಪರಿಚಿತರು ದಾಳಿ ನಡೆಸಿ ಪತ್ನಿ ಸಾವನ್ನಪ್ಪಿದ್ದು, ಗಂಭೀರಾವಾಗಿ ಗಾಯಗೊಂಡಿರುವ ಪತಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಆರು ತಿಂಗಳ ಹಿಂದೆ  ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮೇಲೆ  ಈ ರೀತಿ ಭಯಾನಕ ದಾಳಿ ನಡೆದಿದೆ. ಘಟನೆಯಲ್ಲಿ ತ್ರಿವೇಣಿ (35) ಸ್ಥಳದಲ್ಲಿ ಮೃತರಾಗಿದ್ದು, ಪತಿ ವಿನೋದ್ (30) ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ನಿವಾಸಿಯಾಗಿದ್ದ ದಂಪತಿ ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಬ್ಯಾಂಕ್ ಉದ್ಯೋಗಿಗಳಾಗಿದ್ದು, ಕಾರಟಗಿಯಲ್ಲಿ ವಾಸವಾಗಿದ್ದರು. […]

ತೇರದಾಳದಲ್ಲಿ ಯೋಗ ಮಾಡುತ್ತಲೇ ಕೊನೆಯುಸಿರೆಳೆದ ಶಿಕ್ಷಕ…!

Thursday, June 21st, 2018
master

ಬಾಗಲಕೋಟೆ: ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ಜಿಲ್ಲೆಯಲ್ಲಿ ದುರಂತವೊಂದು ನಡೆದಿದೆ. ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದಲ್ಲಿ ಯೋಗ ಮಾಡುತ್ತಿದ್ದ ವೇಳೆ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಶಿಕ್ಷಕ ವಿಶ್ವನಾಥ್‌ ಬಿರಾದಾರ (50) ಎಂದು ತಿಳಿದು ಬಂದಿದ್ದು, ಯೋಗ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ತೇರದಾಳ ಪಟ್ಟಣದ ಜೆವಿ ಮಂಡಳ ಸಂಸ್ಥೆಯ ಗುರುಕುಲ ಕ್ಯಾಂಪಸ್‌ನಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕ ಭಾಗವಹಿಸಿದ್ದರು. ಹೃದಯಾಘಾತಕ್ಕೆ ಒಳಗಾದ ಶಿಕ್ಷಕ ವಿಶ್ವನಾಥ್‌ ಎಸ್.ಜೆ. ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಗಣಿತ […]