ಕಾವೂರು ಸಿಗಡಿ ಹೊಂಡಕ್ಕೆ ಬಿದ್ದು ಕಾರ್ಮಿಕನ ಸಾವು
Saturday, June 16th, 2018ಮಂಗಳೂರು : ಸಿಗಡಿ ಕೃಷಿ ಹೊಂಡಕ್ಕೆ ಬಿದ್ದು ಉತ್ತರ ಕರ್ನಾಟಕ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಾವೂರು ಬಳಿಯ ಭಟ್ಟಕುದ್ರು ಎಂಬಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ಮೂಲದ ಮುತ್ತ(21) ಸಾವನ್ನಪ್ಪಿದ ಕಾರ್ಮಿಕ. ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ದೀಪಕ್ ಪೂಜಾರಿ ತಮ್ಮನಿಗೆ ಸೇರಿದ ಕೃಷಿ ಹೊಂಡಕ್ಕೆ ಬಿದ್ದು ಅವರು ಸಾವನ್ನಪ್ಪಿದ್ದಾರೆ. ಪಾಲ್ಗುಣಿ ನದಿ ಮಧ್ಯದ ಕುದ್ರುವಿನಲ್ಲಿ ಸಿಗಡಿ ಕೃಷಿ ನಡೆಯುತ್ತಿತ್ತು. ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.