ಕಾವೂರು ಸಿಗಡಿ ಹೊಂಡಕ್ಕೆ ಬಿದ್ದು ಕಾರ್ಮಿಕನ ಸಾವು

Saturday, June 16th, 2018
Prowns pond

ಮಂಗಳೂರು : ಸಿಗಡಿ ಕೃಷಿ ಹೊಂಡಕ್ಕೆ ಬಿದ್ದು ಉತ್ತರ ಕರ್ನಾಟಕ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಾವೂರು ಬಳಿಯ ಭಟ್ಟಕುದ್ರು ಎಂಬಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ಮೂಲದ ಮುತ್ತ(21) ಸಾವನ್ನಪ್ಪಿದ ಕಾರ್ಮಿಕ. ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ದೀಪಕ್ ಪೂಜಾರಿ ತಮ್ಮನಿಗೆ ಸೇರಿದ ಕೃಷಿ ಹೊಂಡಕ್ಕೆ ಬಿದ್ದು ಅವರು ಸಾವನ್ನಪ್ಪಿದ್ದಾರೆ. ಪಾಲ್ಗುಣಿ ನದಿ ಮಧ್ಯದ ಕುದ್ರುವಿನಲ್ಲಿ ಸಿಗಡಿ ಕೃಷಿ ನಡೆಯುತ್ತಿತ್ತು. ಮಂಗಳೂರಿನ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Tuesday, April 24th, 2018
siddaramaih

ಬಾಗಲಕೋಟೆ: ಬಾದಾಮಿ ಮತ್ತು ಚಾಮುಂಡೇಶ್ವರಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನನಗೆ ಜನರ ಆಶೀರ್ವಾದ ಇದೆ. ಯಾವುದೇ ಸೋಲಿನ ಭೀತಿ ಕಾಡುತ್ತಿಲ್ಲ. ಬಿಜೆಪಿಯವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಕೊಪ್ಪಳದಿಂದಲೂ ಎಂಪಿ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಈ ಬಾರಿ ಈ ಭಾಗದ ಜನರು ಇಲ್ಲಿಂದ ನಿಲ್ಲುವಂತೆ ಒತ್ತಾಯಿಸಿದ್ರು. ಅಲ್ಲದೆ ಹೈಕಮಾಂಡ್‌ ಮೇಲೂ ಒತ್ತಡ ತಂದಿದ್ರು. ಹೀಗಾಗಿ ಬಾದಾಮಿ ಮತಕ್ಷೇತ್ರದಿಂದ ಸ್ಪರ್ಧೆ […]