ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ 6ವರ್ಷಗಳ ಶಿಕ್ಷೆ

Tuesday, November 28th, 2023
ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ 6ವರ್ಷಗಳ ಶಿಕ್ಷೆ

ಮಂಗಳೂರು : ಅಂಗಡಿಗೆ ತಿಂಡಿ ಖರೀದಿಸಲು ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದಲ್ಲಿ ವಿಜಯ್ ಪ್ರವೀಣ್ ಕುಟಿನ್ಹಾ (29) ಎಂಬಾತ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ನ್ಯಾಯಾಧೀಶೆ ಮಂಜುಳಾ ಇಟ್ಟಿ 6ವರ್ಷಗಳ ಕಾಲ ಶಿಕ್ಷೆ ವಿಧಿಸಿ ಈ ತೀರ್ಪು ನೀಡಿದ್ದಾರೆ. 2022ರ ಎ.20ರಂದು ಸಂಜೆ ಬಾಲಕಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಅಂಗಡಿಯೊಂದಕ್ಕೆ ತಿಂಡಿ ಖರೀದಿಸಲು ತೆರಳಿದ್ದಾಳೆ ಎನ್ನಲಾಗಿದೆ. ಆಗ […]

ಸರಕಾರಿ ಬಾಲಕಿ ಯರ ಬಾಲಮಂದಿರದಲ್ಲಿ ವಾಸವಿದ್ದ ವಿದ್ಯಾರ್ಥಿನಿ ನಾಪತ್ತೆ

Saturday, March 19th, 2022
Suchitra

ಉಡುಪಿ : ನಿಟ್ಟೂರು ಸರಕಾರಿ ಬಾಲಕಿ ಯರ ಬಾಲಮಂದಿರದಲ್ಲಿ ವಾಸವಿದ್ದ ಚೈತ್ರಾ ಆಲಿಯಾಸ್ ಸುಚಿತ್ರಾ (17) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ. ಆಕೆ ನಗರದ ಹನುಮಂತನಗರ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ. 166 ಸೆ.ಮೀ. ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿ ಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್​ ಬಂಧನ

Tuesday, February 8th, 2022
usthad

ಮಂಗಳೂರು: ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್ನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಂಡಡ್ಕದ ಶಂಶುಲ್ ಹುದಾ ಮದರಸದ ಉಸ್ತಾದ್ ಸಿರಾಜುದ್ದೀನ್ ಮದನಿ ಬಂಧಿತ ಆರೋಪಿ. ಮದರಸ ಶಿಕ್ಷಣ ಪಡೆಯುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಆ ಬಾಲಕಿಯರು ತಮ್ಮ ತಾಯಿಯಲ್ಲಿ ಹೇಳಿಕೊಂಡಿದ್ದರು. ಆಕೆ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ನೀಡಿದ್ದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ ಪುತ್ತೂರು ಮಹಿಳಾ ಠಾಣೆ […]

ಬಾಲಕಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ರೌಡಿಶೀಟರ್

Monday, November 8th, 2021
ಬಾಲಕಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ರೌಡಿಶೀಟರ್

ಮಂಗಳೂರು : ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾವೆಸಗಿರುವ ಆರೋಪದ ಮೇಲೆ ರೌಡಿಶೀಟರ್ನನ್ನು ನಗರದ ಪಾಂಡೇಶ್ವರ ಮಹಿಳಾ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆಯ ರೌಡಿಶೀಟರ್ ನವೀನ್ ಸಿಕ್ವೇರ (34) ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನವೀನ್ ಸಿಕ್ವೇರ ಸಂತ್ರಸ್ತ ಬಾಲಕಿಯ ಸಹೋದರನೊಂದಿಗೆ ಗೆಳೆತನವಿತ್ತು. ಈ ಹಿನ್ನೆಲೆ ಆರೋಪಿ ಬಾಲಕಿಯ ಮನೆಗೆ ಕೆಲವೊಮ್ಮೆ ಬಂದು ಹೋಗುತ್ತಿದ್ದ. ಇತ್ತೀಚೆಗೆ ಆರೋಪಿ ಬಾಲಕಿಯ ಮನೆಗೆ ಯಾರೂ ಇಲ್ಲದ ಸಂದರ್ಭ ಬಂದಿದ್ದು, ಈ ಸಂದರ್ಭ ಜ್ಯೂಸ್‌ನಲ್ಲಿ ಅಮಲು ಪದಾರ್ಥ […]

ಹುಟ್ಟುಹಬ್ಬಕ್ಕೆ ಗಂಡ ಹೊಸ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು, ಗಂಡನ ಮನೆಯಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

Wednesday, May 26th, 2021
hanging

ಗೌರಿಬಿದನೂರು :  ತನ್ನ ಹುಟ್ಟುಹಬ್ಬಕ್ಕೆ ಗಂಡ ಹೊಸ ಬಟ್ಟೆಯನ್ನು ತೆಗೆದುಕೊಟ್ಟಿಲ್ಲ ಎಂದು ಮನನೊಂದು 16 ವರ್ಷದ ಬಾಲಕಿ ಮಹಡಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  5ನೇ ವಾರ್ಡಿನ ಮಾರುತಿ ಸರ್ಕಲ್‌ ಬಳಿ ಬುಧವಾರ  ನಡೆದಿದೆ. ಮೃತ ಬಾಲಕಿ ಮತ್ತು ಮಹದೇವ ಅಲಿಯಾಸ್‌ ಮಣಿ ಒಂದೂವರೆ ವರ್ಷದಿಂದ ಪ್ರೀತಿಸಿದ್ದು ಒಂದು ವರ್ಷದಿಂದ ಮಹದೇವನ ಮನೆಯಲ್ಲೇ ಇದ್ದಳು. ಕಳೆದ 3 ತಿಂಗಳ ಹಿಂದೆಯಷ್ಟೇ ಇಬ್ಬರೂ ಮದುವೆಯಾಗಿದ್ದರು ಎನ್ನಲಾಗಿದೆ. ಮೃತಳು ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಬಳಿಯ ಬೇವನಹಳ್ಳಿ ಗ್ರಾಮದ […]

ಬಾಲಕಿಯನ್ನು ಅತ್ಯಾಚಾರಗೈದು ಮೊಬೈಲ್ ನಲ್ಲಿ ನಗ್ನ ಫೋಟೋ ತೆಗೆದು ಬೆದರಿಕೆ : ಪ್ರಕರಣ ದಾಖಲು

Thursday, February 11th, 2021
Child Rape

ಬಂಟ್ವಾಳ : ಬೋಳಂತೂರು ಗ್ರಾಮದ  ಬಾಲಕಿಯೊಬ್ಬಳನ್ನು ಅತ್ಯಾಚಾರಗೈದು ಬಳಿಕ ಮೊಬೈಲ್ ನಲ್ಲಿ ಆಕೆಯ ನಗ್ನ ಫೋಟೋಗಳನ್ನು ತೆಗೆದು ಬೆದರಿಕೆ ಹಾಕಿರುವ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಅಬೂಬಕರ್‌ ಸಿದ್ದೀಕ್‌ ಮತ್ತು ಚಪ್ಪಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ‌ ಬೋಳಂತೂರು ಗ್ರಾಮದ ಬಾಲಕಿಯನ್ನು ಆಕೆಯ ನೆರೆಮನೆಯವನಾದ ಆರೋಪಿ ಅಬೂಬಕರ್‌ ಸಿದ್ದೀಕ್ ಮತ್ತು ಆತನ ಸ್ನೇಹಿತ ಚಪ್ಪಿ ಪುಸಲಾಯಿಸಿ ಜ.25ರಂದು ಅತ್ಯಾಚಾರ ಎಸಗಿದ್ದಾರೆ ಎಂದು […]

ಕೋಳಿ ಫಾರಂನಲ್ಲಿ ಕೂಡಿಹಾಕಿ 17 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ

Thursday, October 15th, 2020
Rape

ಕಟಕ್ : ಮನೆಯಿಂದ ಓಡಿಹೋಗಿದ್ದ 17 ವರ್ಷದ ಬಾಲಕಿಯನ್ನು ಕೋಳಿ ಫಾರಂನಲ್ಲಿ ಕೂಡಿಹಾಕಿ 22 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದಲ್ಲಿ ನಡೆದಿದೆ. ಕಟಕ್ ನಲ್ಲಿ ಕೋಳಿ ಸಾಕಣೆ ಕೇಂದ್ರಕ್ಕೆ ಹುಡುಗಿಯನ್ನು ಕರೆದೊಯ್ದು ಕೂಡಿಹಾಕಿ ಅತ್ಯಾಚಾರ ಎಸಗಲಾಗಿದೆ. ಜಗತ್ ಸಿಂಗ್ ಪುರ್ ಜಿಲ್ಲೆಯ ಟಿರ್ಟಾಲ್ ನಿವಾಸಿಯಾಗಿರುವ ಹುಡುಗಿ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಓಡಿ ಹೋಗಿದ್ದಾಳೆ. ಓಎಂಸಿ ಸ್ಕ್ವೇರ್ ನಲ್ಲಿರುವ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಭರವಸೆ ನೀಡಿದ್ದಾನೆ. ಆದರೆ […]

ಉದ್ಯಮಿ ಮನೆಯಿಂದ ತಪ್ಪಿಸಿಕೊಂಡ ಜೀತಕ್ಕೆ ಇಟ್ಟುಕೊಂಡಿದ್ದ ಬಾಲಕಿ, ಸಹಾಯಕ್ಕೆ ಬಂದ ಚೈಲ್ಡ್‌ಲೈನ್

Monday, October 5th, 2020
child jeeta

ಮಂಗಳೂರು: ಉದ್ಯಮಿಯೊಬ್ಬರು ಬಾಲಕಿಯೊಬ್ಬಳನ್ನು ಜೀತಕ್ಕೆ ಇಟ್ಟುಕೊಂಡಿದ್ದು ಆಕೆ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ ತಪ್ಪಿಸಿಕೊಂಡಿದ್ದಲ್ಲದೆ, ರಸ್ತೆಗೆ ಬಂದು ಸಹಾಯ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಳು. ಇದನ್ನು ಗಮನಿಸಿದ ಸ್ಥಳೀಯರು ಚೈಲ್ಡ್‌ಲೈನ್‌ಗೆ ಕರೆ ಮಾಡಿ ತಿಳಿಸಿದ್ದರು. ಆ ಪ್ರಕಾರ ಬರ್ಕೆ ಪೊಲೀಸರು ಬಾಲಕಿಯನ್ನು ಜೀತಕ್ಕಿಟ್ಟುಕೊಂಡಿದ್ದ ಮನೆಗೆ ತೆರಳಿದ್ದು, ಯಾವುದೇ ಕ್ರಮ ವಹಿಸದೆ ಹಿಂದಿರುಗಿದ್ದಾರೆ ಎಂದು ಒಡನಾಡಿ ಎನ್ಜಿಒ ಸಂಸ್ಥೆ ಆರೋಪಿಸಿದೆ. ಬಳಿಕ ಬಾಲಕಿ ಒಡನಾಡಿ ಸಂಸ್ಥೆಗೆ ತೆರಳಿ ದೂರು ನೀಡಿದ್ದಳು. ಮೈಸೂರಿನ ಈ ಬಾಲಕಿಯನ್ನು ಜೀತದಾಳು ಆಗಿ ಇರಿಸಿಕೊಂಡಿರುವುದರ ನಗರದ ಉದ್ಯಮಿಯೊಬ್ಬರ ವಿರುದ್ಧ […]

ಹುಡುಗಿಯರನ್ನು ಚುಡಾಯಿಸುತ್ತಿದ್ದುದಲ್ಲದೆ, ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಬಾಲಕನ ಬಂಧನ

Thursday, October 1st, 2020
Girl

ಬಂಟ್ವಾಳ : ಫರಂಗಿಪೇಟೆ ಸಮೀಪದ ಕುಂಪಜಲು ಎಂಬಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾರಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಅಪರಿಚಿತ ಆರೋಪಿ ಪತ್ತೆಯಾಗಿರಲಿಲ್ಲ. ಕಳೆದ ಕೆಲವು ತಿಂಗಳಿನಿಂದ ಕುಂಪಣಮಜಲು ಪರಿಸರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಯುವತಿಯರಿಗೆ ಈತ ಕಿರುಕುಳ ನೀಡುತ್ತಿದ್ದ ಬಗ್ಗೆ ಸಾರ್ವಜನಿಕ ದೂರುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಪ್ರಸನ್ನ ನೇತೃತ್ವದ ತಂಡ ಅಪ್ರಾಪ್ತ ಬಾಲಕನೊಬ್ಬನನ್ನು […]

ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ

Tuesday, August 4th, 2020
hoisala

ಮಂಗಳೂರು : 2020-21 ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು […]