ಸರಕಾರಿ ಬಾಲಕಿ ಯರ ಬಾಲಮಂದಿರದಲ್ಲಿ ವಾಸವಿದ್ದ ವಿದ್ಯಾರ್ಥಿನಿ ನಾಪತ್ತೆ

Saturday, March 19th, 2022
Suchitra

ಉಡುಪಿ : ನಿಟ್ಟೂರು ಸರಕಾರಿ ಬಾಲಕಿ ಯರ ಬಾಲಮಂದಿರದಲ್ಲಿ ವಾಸವಿದ್ದ ಚೈತ್ರಾ ಆಲಿಯಾಸ್ ಸುಚಿತ್ರಾ (17) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ. ಆಕೆ ನಗರದ ಹನುಮಂತನಗರ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ. 166 ಸೆ.ಮೀ. ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿ ಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದವನ ಸಂಬಂಧಿಕನ ಪ್ರತಿಕಾರ, ಪೋಲೀಸರ ಮೇಲೆ ತಲವಾರಿನಿಂದ ಹಲ್ಲೆ

Monday, December 21st, 2020
Noushin

ಮಂಗಳೂರು : ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಸಂಬಂಧಿಕನೊಬ್ಬ ಅದಕ್ಕೆ  ಪ್ರತಿಕಾರವಾಗಿ ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರ ಫರ್ನಿಚರ್ ಮುಂಭಾಗದಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುದ್ರೋಳಿ ನಿವಾಸಿ ಮಹಮ್ಮದ್‌‌ ನವಾಝ್‌ (30) ಹಾಗೂ 16 ವರ್ಷದ ಬಾಲಕ ಎಂದು ತಿಳಿದುಬಂದಿದೆ. ನವಾಝ್‌ಗೆ ಡಿ.24ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಬಾಲಕನನ್ನು ಉಡುಪಿಯ ನಿಟ್ಟೂರಿನ ಬಾಲಮಂದಿರಕ್ಕೆ ರವಾನೆ ಮಾಡಲಾಗಿದೆ. 2019ರ ಡಿ.19ರಂದು […]