ಫೆ.9 ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ವೈಭವದ ಮಹಾಮಸ್ತಕಾಭಿಷೇಕ
Wednesday, January 2nd, 2019ಧರ್ಮಸ್ಥಳ:ತ್ಯಾಗತಪಸ್ಸು ಮತ್ತು ಮೋಕ್ಷದ ಪ್ರತೀಕವಾದ ಬಾಹುಬಲಿ ಜೈನಧರ್ಮದ ಸಮಸ್ಥ ಮೌಲ್ಯಗಳ ಪ್ರತಿರೂಪ. ರಾಜಭೋಗಜೀವನ ತ್ಯಜಿಸಿ ಮೋಕ್ಷದಋಜು ಮಾರ್ಗವನ್ನು ಆರಿಸಿಕೊಂಡು ಆಧ್ಯಾತ್ಮಿಕ ಉತ್ತುಂಗಕ್ಕೇರಿದ ಬಾಹುಬಲಿಯ ಜೀವನ ಇಂದಿಗೂ ಎಲ್ಲಾ ಜೈನಧರ್ಮೀಯರಿಗೆ ಆದರ್ಶ ಪ್ರಾಯವಾದದ್ದು. ರಾಜ್ಯದೊಂದಿಗೆ ಉಟ್ಟ ಬಟ್ಟೆಯನ್ನೂ ತ್ಯಜಿಸಿದ ಬಾಹುಬಲಿ ಆಡಂಬರ, ಅಭಿಷೇಕ ಇವೆಲ್ಲವುಗಳ ಪರಿಧಿಯನ್ನು ಮೀರಿ ನಿಂತವರು. ಆದರೂ ಅವರ ಪರಮೋಚ್ಛತ್ಯಾಗ- ತಪಸ್ಸಿನ ಗುಣಗಳನ್ನು ಆರಾಧಿಸುವ ಭಕ್ತರು 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನೆರವೇರಿಸುವ ಸಂಪ್ರದಾಯವನ್ನು ಪಾಲಿಸುತ್ತಾ ಬಂದಿದ್ದಾರೆ. ಗಗನ ಸದೃಶ ಮೂರ್ತಿಯತಲೆಯಿಂದ ಕಾಲಿನೆಡೆಗೆ ಹರಿದು ಬರುವ ಅಭಿಷೇಕ ದ್ರವ್ಯಗಳು […]