ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Monday, January 15th, 2024
satish-kumapala

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಜಿಲ್ಲಾಪಂಚಾಯತ್ ಉಪಾಧ್ಯಕ್ಷರಾಗಿದ್ಧ ಸತೀಶ್ ಕುಂಪಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಲ್ಲಿ ಯು.ಟಿ ಖಾದರ್ ವಿರುದ್ಧ ಬಿಜೆಪಿಯಿಂದ ಸತೀಶ್ ಕುಂಪಲ ಅವರು ಸ್ಪರ್ಧಿಸಿ ಸೋತಿದ್ದರು.ಸತೀಶ್ ಕುಂಪಲ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಬಿಲ್ಲಯ್ಯ ಸಮುದಾಯದ ಮುಖಂಡರಾಗಿದ್ದಾರೆ.

ಸಂಘಟನಾತ್ಮಕ ಕರಾವಳಿ ಜಿಲ್ಲೆಗೆ ಪ್ರಮುಖ ಖಾತೆ ಬಿಜೆಪಿ ಹರ್ಷ : ಸುದರ್ಶನ ಎಂ.

Saturday, August 7th, 2021
Sudarshana-M

ಮಂಗಳೂರು  : ಬಿಜೆಪಿ ಕಾರ್ಯಕರ್ತರ ಪಾರ್ಟಿ. ಪ್ರಾಮಾಣಿಕತೆ, ನಿಷ್ಠೆಯಿಂದ ಕಾರ್ಯ ಮಾಡುವವರನ್ನು ಯಾವತ್ತೂ ಬಿಜೆಪಿ ಕೈ ಬಿಡುವುದಿಲ್ಲ. ರಾಜ್ಯ ಸರ್ಕಾರಕ್ಕೆ 29 ಶಾಸಕರುಗಳನ್ನು ನೀಡಿದ ಕರಾವಳಿ ಜಿಲ್ಲೆಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಕ್ತ ಸ್ಥಾನಮಾನ ನೀಡಿದ್ದು ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕರ್ತರಿಗೆ ಹರ್ಷ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ. ತಿಳಿಸಿದರು. ಎಸ್. ಅಂಗಾರರವರಿಗೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಖಾತೆ, ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗ ಅಭಿವೃದ್ದಿ ಖಾತೆ, ವಿ.ಸುನಿಲ್ […]

ಮೀಜಾರ್ ಸಮೀಪ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ

Wednesday, July 1st, 2020
sudarshan-car

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆಯವರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂ ಗೊಂಡ ಘಟನೆ ಬುಧವಾರ ಮಧ್ಯಾಹ್ನಮೀಜಾರ್ ಸಮೀಪ ನಡೆದಿದೆ. ಕಾರನ್ನು ಸುದರ್ಶ ಅವರೇ ಚಲಾಯಿಸಿದ್ದು, ಘಟನೆಯಲ್ಲಿ ಸುದರ್ಶನ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಿಜಾರ್ ಸಮೀಪ ಪಾದಚಾರಿಗೆ ಕಾರ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ ವೇಳೆ ರಸ್ತೆ ಪಕ್ಕ ಕೆಸರಿಗೆ ಜಾರಿದ ಕಾರ್ ಮುಂಭಾಗದಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿಕೊಟ್ಟು […]

ಕಾರು ಅಪಘಾತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ 5 ಮಂದಿಗೆ ಗಾಯ

Tuesday, September 27th, 2016
car-

ಕಾಸರಗೋಡು: ಕಾರು ನಿಯಂತ್ರಣ ತಪ್ಪಿ ಮಗುಚಿ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ನೇತಾರರು ಗಾಯಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್, ಉದುಮ ಮಂಡಲ ಕಾರ್ಯದರ್ಶಿ ದಿಲೀಪ್ ಕುಮಾರ್, ಕಾಸರಗೋಡು ಮಂಡಲ ಅಧಕ್ಷ ಸುಧಾಮ ಗೋಸಾಡ, ಅಡೂರಿನ ಪ್ರದೀಪ್, ಚಾಲಕ ಕುಂಬಳೆಯ ಗುರುಪ್ರಸಾದ್ ಎಂಬವರು ಗಾಯಗೊಂಡಿದ್ದಾರೆ. ಇವರನ್ನು ವಿದ್ಯಾನಗರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆ ಪಳ್ಳಿಕೆರೆ ಚೇಟುಕುಂಡ್ ಎಂಬಲ್ಲಿ ಅಪಘಾತ ಸಂಭವಿಸಿದೆ. ಕಲ್ಲಿಕೋಟೆಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪರಿಷತ್ ಸಮಾವೇಶದಲ್ಲಿ ಭಾಗವಹಿಸಿ ಶ್ರೀಕಾಂತ್ ಹಾಗೂ ಮತ್ತಿತರರು […]