ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ

Saturday, March 16th, 2024
chakravarti-sulibale

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಬಿಜೆಪಿಯಿಂದ ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ

Wednesday, March 13th, 2024
Brijesh chow

ಮಂಗಳೂರು : ಬಹಳ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಬಿಜೆಪಿ ಟಿಕೆಟ್ ಹಂಚಿಕೆ ಕೊನೆಗೆ ಬ್ರಿಜೇಶ್ ಚೌಟ ಅವರಿಗೆ ದಕ್ಕಿದೆ. ಕಳೆದ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ವಿಜಯ ಗಳಿಸಿದ ನಳಿನ್ ಕುಮಾರ್ ಕಟೀಲ್ ಈ ಬಾರಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಬ್ರಿಜೇಶ್ ಚೌಟ ಆಯ್ಕೆಯ ಈ ವಿಷಯವನ್ನು ಸ್ವತಃ ನಳಿನ್ ಕುಮಾರ್ ಕಟೀಲ್ ಅವರೇ ಹಂಚಿಕೊಂಡಿದ್ದಾರೆ. ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೇ […]

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಸಿ.ಎಚ್.ವಿಜಯಶಂಕರ್ ಇಂದು ಬಿಜೆಪಿಗೆ ಮರುಸೇರ್ಪಡೆ

Tuesday, November 5th, 2019
CH-Vijayshankar

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ, ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ವಿಜಯಶಂಕರ್ ಬಿಜೆಪಿ ಸೇರ್ಪಡೆಗೊಂಡರು. ಈ ವೇಳೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿ.ಜೆ.ಪುಟ್ಟಸ್ವಾಮಿ ಸೇರಿದಂತೆ ಮೈಸೂರು ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಿಎಂ, ವಿಶೇಷ ಕಾರಣಕ್ಕೆ ವಿಜಯಶಂಕರ್ ಅವರು ಪಕ್ಷ ಬಿಟ್ಟಿದ್ದರು. ಆದರೆ ಬಹಳ ದಿನಗಳಿಂದಲೂ ಬಿಜೆಪಿ ಸೇರಲು ಮುಂದಾಗಿದ್ದರು. […]