ಸುಳ್ಯ : ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಗುಂಡಿಟ್ಟು ಕೊಲೆ ಮಾಡಿದ ಅಪರಿಚಿತರು

Thursday, October 8th, 2020
sampath

ಮಂಗಳೂರು: ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಂಪತ್‌ ಕುಮಾರ್‌ (35) ಎಂದು ಗುರುತಿಸಲಾಗಿದೆ. ಬೆಳಗ್ಗೆ 6  ಗಂಟೆ ಸುಮಾರಿಗೆ ಸಂಪತ್‌ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ  ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು  ತಿಳಿಸಿದ್ದಾರೆ.  ಸುಳ್ಯ ತಾಲೂಕಿನ ಶಾಂತಿನಗರದಲ್ಲಿ […]

ಡೀಲ್‌ ವೇಳೆ ಮಾತಿನ ಚಕಮಕಿ : ಇಬ್ಬರಿಗೆ ಗುಂಡೇಟು

Friday, May 29th, 2020
fire

ಚಿಕ್ಕಮಗಳೂರು : ರಿಯಲ್‌ ಎಸ್ಟೇಟ್‌ ವ್ಯವಹಾರದ ಮಾತುಕತೆ ಸಮಯದಲ್ಲಿ ಮಾತಿನ ಚಕಮಕಿಯಿಂದ ಇಬ್ಬರ ಮೇಲೆ ಗುಂಡು ಹಾರಿಸಿದ ಘಟನೆ ಮೇ 28 ರಂದು ಕಡೂರು ತಾಲೂಕಿನ ಬಾಣೂರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರಿನ ಬಿಜೆಪಿ ಮುಖಂಡರೊಬ್ಬರ ಸಂಬಂಧಿ ಕಲ್ಯಾಣ ಕುಮಾರ ಹಾಗೂ ಉಪನ್ಯಾಸಕ ಸುಮಂತ ಎಂಬುವವರೇ ಗುಂಡೇಟು ತಿಂದವರು. ಬೆಂಗಳೂರಿನಿಂದ ರಿಯಲ್‌ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆಗಮಿಸಿದ್ದ ವ್ಯಕ್ತಿಗಳೇ ಗುಂಡೇಟು ಹಾಕಿದ್ದಾರೆ. ಈಗ ಅವರು ಪರಾರಿಯಾಗಿದ್ದಾರೆ. ಈ ಬಗ್ಗೆ ಸಖರಾಯಪಟ್ಟಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಬ್ಬರ ದೇಹದಲ್ಲೂ ಗುಂಡುಗಳು […]

ಮೈಸೂರು : ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ

Friday, March 6th, 2020
anand

ಮೈಸೂರು : ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನನ್ನು ಆತನ ಸ್ನೇಹಿತರೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಎಂದು ಗುರುತಿಸಲಾಗಿದೆ. ಗುರುವಾರ ಆನಂದ್ ಹುಟ್ಟುಹಬ್ಬವಿದ್ದು, ಕುವೆಂಪು ನಗರದ ಲವಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್‍ಮೆಂಟ್‍ನಲ್ಲಿ ರೂಮ್ ಮಾಡಿಕೊಂಡು ಪಾರ್ಟಿ ಮಾಡುತ್ತಿದ್ದಾಗ ಸ್ನೇಹಿತರಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾನೆ. ಉತ್ತನಹಳ್ಳಿ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಪಾರ್ಟಿ ಮುಗಿಸಿ ಬಂದಿದ್ದ ಆನಂದ್, ನಂತರ ವಾಪಸ್ ಬಂದು ಸರ್ವಿಸ್ […]

ಬಹುಮತ ಕಳೆದುಕೊಂಡ ಮೈತ್ರಿ ಸರಕಾರ ; ಬುಧವಾರ ಬಿಜೆಪಿ ಮುಖಂಡರ ರಾಜ್ಯಪಾಲರ ಭೇಟಿ

Tuesday, July 9th, 2019
Yedyurappa

ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬುಧವಾರ ಪ್ರತಿಭಟನೆ ನಡೆಸಲಿದ್ದು, ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. ಇಂದು ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ […]

ಪ್ರೇಮಿಯಿಂದ ಇರಿತಕ್ಕೊಳಗಾಗಿದ್ದ ಯುವತಿ ತೀವ್ರನಿಗಾ ಘಟಕದಲ್ಲಿ, ಬಿಜೆಪಿ ಮುಖಂಡರಿಂದ ಸಾಂತ್ವನ

Saturday, June 29th, 2019
deeksha

ಮಂಗಳೂರು :  ಪ್ರೇಮಿಯಿಂದ ಇರಿತಕ್ಕೊಳಗಾಗಿದ್ದ ಯುವತಿ ದೇರಳಕಟ್ಟೆ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ವೆಂಟಿಲೇಟರ್ ಅಳವಡಿಸಲಾಗಿದ್ದು ಎದೆ,  ಹೊಟ್ಟೆ ಬಾಗಕ್ಕೆ ಇರಿದ ಪರಿಣಾಮ ತೀವ್ರ ರಕ್ತ ಸ್ರಾವ ಉಂಟಾಗಿದೆ.  ಸ್ಥಿತಿ ಗಂಭೀರವಾಗಿದ್ದರೂ ಆಕೆ ಶನಿವಾರ ಚಿಕಿತ್ಸೆಗೆ ಸ್ಪಂದಿಸುತ್ತಿದಾಳೆ ಎಂದು  ಆಸ್ಪತ್ರೆಯಲ್ಲಿದ್ದ ಕುಟುಂಬದ ಮೂಲಗಳು ತಿಳಿಸಿವೆ. ಈ ಮಧ್ಯೆ ಬಿಜೆಪಿ ಮುಖಂಡರಾದ ಮಂಗಳೂರು ಕ್ಷೇತ್ರಾದ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹಾಗೂ ಚಂದ್ರಹಾಸ್ ಪಂಡಿತಹೌಸ್ ಭೇಟಿಯಾಗಿ ಧೈರ್ಯತುಂಬಿದರು. ಯುವತಿಯ ತಂದೆ ತಾಯಿ ಆಸ್ಪತ್ರೆಯಲ್ಲೇ ಇದ್ದು ಮಗಳ ಸುದ್ದಿ ಕೇಳಿ ತಾಯಿ ಕುಸಿದಿದ್ದರು. ಯುವತಿಯ ಚಿಕಿತ್ಸೆಗೆ ಏಳು ವೈದ್ಯರು ಶ್ರಮವಹಿಸಿದ್ದಾರೆ 15 […]