ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನ

Saturday, February 17th, 2024
BJP-protest

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು. ಅಡ್ಯಾರ್ ನ ಸಹ್ಯಾದಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕಾರನ್ನು ತಡೆದು ಮುತ್ತಿಗೆ ಹಾಕಲು ಯತ್ನಿಸಿದರು. ಜೆರೋಸಾ ಶಾಲೆಯಲ್ಲಿ […]

ಬಿಜೆಪಿ ಯುವ ಮೋರ್ಚಾ ನೀಡಿರುವ ದೂರು ರಾಜಕೀಯ ಪ್ರೇರಿತ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Wednesday, May 19th, 2021
dk-Shivakumar

ಬೆಂಗಳೂರು : ಗೃಹ ಆರೈಕೆಯಲ್ಲಿರುವ ಕೋವಿಡ್ ಸೋಂಕಿತರಿಗೆ ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ನೀಡಿರುವ ದೂರು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಯುವ ಮೋರ್ಚಾದ ಬೆಂಗಳೂರು ಕೇಂದ್ರ ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ವಿಜಯೇಂದ್ರ ಎಂಬುವರು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ […]

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Friday, September 18th, 2020
Kasaragod Protest

ಕಾಸರಗೋಡು : ಮಂಜೇಶ್ವರ ಶಾಸಕ ಎಂ.ಸಿ. ಖಮರುದ್ದೀನ್ ಹಾಗೂ ಕೇರಳ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ನಡೆಸಿದ ಪ್ರತಿಭಟನಾ ಜಾಥಾ ಹಿಂಸೆಗೆ ತಿರುಗಿತು. ವಿದ್ಯಾನಗರ ಬಿ.ಸಿ. ರೋಡ್ ನಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಗೇಟ್ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ದೂಡಿ ಹಾಕಿ ಮುನ್ನುಗ್ಗಲು ಯತ್ನಿಸಿದ್ದು, ಕೆಲ ಕಾರ್ಯಕರ್ತರು ಬ್ಯಾರಿಕೇಡ್ ಮೂಲಕ ಜಿಲ್ಲಾಧಿಕಾರಿ ಕಚೇರಿ […]

ರಮ್ಯಾ ಮಂಗಳೂರಿಗೆ ಬರುತ್ತಿದ್ದಂತೆ ರಮ್ಯಾರ ಕಾರಿಗೆ ಮೊಟ್ಟೆ ಎಸೆತ

Friday, August 26th, 2016
Ramya

ಮಂಗಳೂರು: ಪಾಕಿಸ್ತಾನದ ಜನರ ಪರ ಹೇಳಿಕೆ ನೀಡಿ ವಿವಾದಕ್ಕೀಡಾಗಿರುವ ಮಾಜಿ ಸಂಸದೆ, ಚಿತ್ರನಟಿ ರಮ್ಯಾ ಮಂಗಳೂರಿಗೆ ಬರುತ್ತಿದ್ದಂತೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು,ರಮ್ಯಾರ ಕಾರಿಗೆ ಮೊಟ್ಟೆ ಎಸೆದಿದ್ದಾರೆ. ರಮ್ಯಾ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ಮಾಡಿದ ಪೊಲೀಸರು, ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕದ್ರಿಯಲ್ಲಿ ಆಯೋಜಿಸಲಾಗಿರುವ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಪ್ರಯುಕ್ತ ಅವರು ಆಗಮಿಸಿದ್ದರು. ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ […]

ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತೊಕ್ಕೊಟ್ಟಿನಲ್ಲಿ ಪ್ರತಿಭಟನೆ

Thursday, November 14th, 2013
BJP-YM

ಮಂಗಳೂರು: ಮಂಗಳೂರು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತೊಕ್ಕೊಟ್ಟು-ಬಬ್ಬುಕಟ್ಟೆವರೆಗಿನ ರಸ್ತೆಯ ದುರಸ್ತಿಯನ್ನು ಖಂಡಿಸಿ  ಬುಧವಾರ ನಗರದ ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜಯರಾಂ ಶೆಟ್ಟಿ ಮಾತನಾಡಿ, ಒಳಚರಂಡಿ ಕಾಮಗಾರಿಗಾಗಿ ತೊಕ್ಕೊಟ್ಟಿನಿಂದ ಬಬ್ಬುಕಟ್ಟೆವರೆಗೆ ಅಗೆಯಲಾಗಿರುವ ರಸ್ತೆ ದುರಸ್ಥಿಪಡಿಸುವಂತೆ ಒತ್ತಾಯಿಸಿ , ರಾಜ್ಯ ಸರಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ತೊಕ್ಕೊಟ್ಟಿ ನಿಂದ ಬಬ್ಬುಕಟ್ಟೆವರೆಗಿನ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ಆರು ತಿಂಗಳ ಹಿಂದೆಯೂ ನಡೆದಂತಹ ಪ್ರತಿಭಟನೆ ವೇಳೆ ಅಧಿಕಾರಿಗಳು ನೀಡಿ ರುವ ಭರವಸೆಗಳು ಇನ್ನೂ ಈಡೇರಿಲ್ಲ. ಎಡಿಬಿಯಿಂದ ಲೋಕೋಪಯೋಗಿ ಇಲಾಖೆಗೆ […]

ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

Saturday, July 30th, 2011
BJP Yuva Morcha/ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಸಂಘ ನಿಕೇತನದಲ್ಲಿ ಶುಕ್ರವಾರ ಆಯೋಜಿಸಿದ ಯುವ ಸಂಘರ್ಷ ಆಂದೋಲನವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್‌ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಬಿಜೆಪಿ ವಿವಿಧ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಮತ್ತೆಮತ್ತೆ ಎದ್ದುಬಂದಿದೆ, ಸರಕಾರವನ್ನು ಉರುಳಿಸಲು ರಾಜಕೀಯ ವಿರೋಧಿಗಳ ಪ್ರಯತ್ನ ನಿರಂತರ ನಡೆಯುತ್ತಿದೆ ಎಂದರು. ಕಾರ್ಯಕರ್ತರು ಇನ್ನಷ್ಟು ಪಕ್ಷದ ಬೆಳವಣಿಗೆಯಲ್ಲಿ ಶ್ರಮವಹಿಸುವುದು ಅತ್ಯಗತ್ಯ. ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರವನ್ನು […]