ರಿಕ್ಷಾ ಚಾಲಕನ ಮೇಲೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ
Thursday, October 17th, 2019ಮಂಗಳೂರು : ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ಸಮೀಪದ ಬಿತ್ತುಪಾದೆ ಎಂಬಲ್ಲಿ ರಿಕ್ಷಾ ಚಾಲಕನೋರ್ವನ ಮೇಲೆ ದುಷ್ಕರ್ಮಿಗಳ ದಾಳಿ ನಡೆಸಿದ ಘಟನೆ ಗುರುವಾರ ನಡೆದಿದೆ. ಬಿತ್ತುಪಾದೆ ಸಮೀಪದ ನಿವಾಸಿ ಸಂತೋಷ್ (35) ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ. ಇಂದು ಸುಮಾರು 11 ಗಂಟೆಯ ವೇಳೆ ಇವರ ಮೇಲೆ ದಾಳಿ ನಡೆದಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಗೊಳಗಾರ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ತಿಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.