ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿ ಮೊಹಮ್ಮದ್ ಶಹನಾವಾಜ್ ಬಂಧನ

Tuesday, October 25th, 2016
Mohammed-shahnawaz

ಮಂಗಳೂರು: ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆಗೆ ಕಾರಣವಾದ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶಹನವಾಜ್ (20) ಬಂಧಿತ ಆರೋಪಿ. ಸಂಜೆ ಪಂಪ್‌ವೆಲ್‌ ಸರ್ಕಲ್ ಬಳಿ ಈತನನ್ನು ಬಂಧಿಸಲಾಗಿದೆ. ಮಿಲಾಗ್ರಿಸ್ ಕಾಲೇಜಿನ ಮೂರನೇ ವರ್ಷದ ಬಿಬಿಎಂ ವಿದ್ಯಾರ್ಥಿಯಾದ ಮೊಹಮ್ಮದ್ ಶಹನಾವಾಜ್, ಪ್ರಾಂಶುಪಾಲ ಫಾ.ಮೈಕಲ್ ಸಾಂತುಮಾಯರ್ ಮೇಲೆ ಅ. 20ರಂದು ಹಲ್ಲೆ ನಡೆಸಿ ಪರಾರಿಯಾಗಿದ್ದ. ತರಗತಿಗೆ ಸರಿಯಾಗಿ ಹಾಜರಾಗದ ಮೊಹಮ್ಮದ್‌ಗೆ ಸಮರ್ಪಕ ಹಾಜರಾತಿ ಇಲ್ಲದೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರಾಂಶುಪಾಲರು […]

ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

Tuesday, September 6th, 2016
Rajanikanth

ಬಂಟ್ವಾಳ: ಸ್ನೇಹಿತರೊಂದಿಗೆ ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ಇಲ್ಲಿನ ಬಿ.ಸಿ. ರೋಡ್‌‌ ಸಮೀಪ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಂಗಳೂರು ಶ್ರೀನಿವಾಸ್ ಕಾಲೇಜಿನ ದ್ವಿತೀಯ ಬಿಬಿಎಂ ವಿದ್ಯಾರ್ಥಿಯಾಗಿದ್ದ ನಂತೂರು ನಿವಾಸಿ ರಜನಿಕಾಂತ್ (25) ಎಂಬಾತನೆ ಮೃತ ಯುವಕ. ಈತ ಸ್ನೇಹಿತರೊಂದಿಗೆ ನದಿಯ ಆಳ ತಿಳಿಯದೆ ಸ್ನಾನ ಮಾಡಲು ಇಳಿದಿದ್ದು ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾಧಿಕಾರಿ ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು […]

ನಕಲಿ ದಾಖಲೆ ಸೃಷ್ಟಿಸಿ ವಂಚನೆ ಹಿನ್ನಲೆಯಲ್ಲಿ ವಿದ್ಯಾರ್ಥಿ ಬಂಧನ

Saturday, May 11th, 2013
Fazil

ಕಾಸರಗೋಡು : ನಕಲಿ ದಾಖಲೆ ಸೃಷ್ಟಿಸಿ ವಂಚನೆ ನಡೆಸಿರುವ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಬಿಎಂ ಓದುತ್ತಿರುವ ತಿರುವನಂತಪುರ ಮೂಲದ ಫಾಸಿಲ್ ಎಂಬಾತನನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಹೊಸಂಗಡಿಯ ಅಬ್ದುಲ್ ಸುನೈರ್ ಮುನೀರ್ ಎಂಬುವವರ ಡ್ರೈವಿಂಗ್ ಲೈಸನ್ಸನ್ನು ದುರುಪಯೋಗಪಡಿಸಿಕೊಂಡ ಆರೋಪಿ ಫಸೀಲ್, ಸುನೈರ್ ನ ಹೆಸರಲ್ಲಿ ಬ್ಯಾಂಕ್ ನಕಲಿ ದಾಖಲೆ ಸೃಷ್ಟಿಸಿ  ಖಾತೆ ತೆರೆದು ಬ್ಯಾಂಕ್ ನಿಂದ ಹಣ ಪಡೆದು ವಂಚನೆ ನಡೆಸಿದ್ದಾನೆ. ಆರೋಪಿ ಬ್ಯಾಂಕ್ ಗೆ ಸುಮಾರು ೩.೫೦ ಲಕ್ಷ ರೂಪಾಯಿ ವಂಚಿಸಿದ್ದಾಗಿ ತಿಳಿದು ಬಂದಿದೆ. […]