ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ ಸ್ಪಂದನ ಸೇವಾ ಯೋಜನೆಯಡಿ 1ಲಕ್ಷ ಧನ ಸಹಾಯ ಹಸ್ತಾಂತರ

Tuesday, November 21st, 2023
Biruver-Kudla

ಮಂಗಳೂರು : ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ ಸ್ಪಂದನ ಸೇವಾ ಯೋಜನೆಯಡಿ ಕ್ಯಾನ್ಸರ್ ರೋಗಕ್ಕೆ ತುತ್ತಾದ ಬಲ್ಲಾಳ್ `ಭಾಗ್ ನಿವಾಸಿ ಜಗದೀಶ್ ಶೆಟ್ಟಿಗಾರ್ ಕುಟುಂಬಕ್ಕೆ 1ಲಕ್ಷ ರೂ. ಆರ್ಥಿಕ ನೆರವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಕುದ್ರೋಳಿ ಕ್ಷೇತ್ರದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತಾಡಿದ ಅವರು ಕರಾವಳಿ ಕರ್ನಾಟಕದ ಹೆಮ್ಮೆಯ ಸೇವಾ ಸಂಘಟನೆ ಬಿರುವೆರ್ ಕುಡ್ಲ ಕಳೆದ 9 ವರ್ಷದಲ್ಲಿ ದಾನಿಗಳ ನೆರವಿನಿಂದ ಕೋಟ್ಯಾಂತರ ರೂ.ಆರ್ಥಿಕ ಸಹಾಯವನ್ನು ಸಾವಿರಾರು ಕುಟುಂಬಗಳಿಗೆ ವಿತರಿಸಿ ಆಸರೆಯಾಗಿದೆ. ಇವರ ಸೇವೆ […]

ನಾರಾಯಣ ಗುರುಗಳ ಸ್ತಬ್ಧ ಚಿತ್ರದ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಖಂಡನೀಯ

Tuesday, January 25th, 2022
Biruver Kudla

ಮಂಗಳೂರು : ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ದ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಪಕ್ಷಗಳು ರಾಜಕಾರಣ ಮಾಡುತ್ತಾ  ಕಚ್ಚಾಡುತ್ತಿದೆ. ಸ್ವಾಭಿಮಾನ ಜಾಥಾ ರಾಜಕೀಯ ರಹಿತವಾಗಿದ್ದರೆ ಮಾತ್ರ ಬೆಂಬಲ ನೀಡುವುದಾಗಿ ಬಿರುವೆರ್ ಕುಡ್ಲ ಸ್ಪಷ್ಟ ಪಡಿಸಿದೆ. ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಸಂಘಟನೆ ಮುಖಂಡ ಲಕ್ಷ್ಮೀಶ್, ಬಿರುವೆರ್ ಕುಡ್ಲ ನಗರದ ವೃತ್ತಕ್ಕೆ ನಾರಾಯಣ ಗುರು ಹೆಸರಿಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ಬೆಂಬಲ ನೀಡದವರು ಇಂದು ಜಾಥಾದಲ್ಲಿರುವುದು ರಾಜಕೀಯದ ಹುನ್ನಾರದಂತೆ ಕಾಣುತ್ತಿದೆ  ಎಂದರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ […]

ಶರಣ್ ಪಂಪ್‌ವೆಲ್‌ ಗೆ ಮುಸ್ಲಿಮರ ಸಂಸ್ಥೆಯ ಹಣವಾಗುತ್ತದೆ, ಆದರೆ ಮುಸ್ಲಿಂ ಯುವಕರು ಬೇಡವಾಗಿದೆ : ಬಿರುವೆರ್ ಕುಡ್ಲ

Tuesday, November 16th, 2021
Birver Kudla

ಮಂಗಳೂರು : ಬಲ್ಲಾಳ್ ಭಾಗ್ ಘಟನೆಯ ಬಗ್ಗೆ ಪೂರ್ಣ ಮಾಹಿತಿಯಿಲ್ಲದೆ  ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ ಬಿರುವೆರ್ ಕುಡ್ಲ ಸಂಘಟನೆಯ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ ಎಂದು  ಸಂಘಟನೆಯ ಮುಖ್ಯಸ್ಥ ಲಕ್ಷ್ಮೀಶ್ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ ಸಹಾಯ ಮಾಡಿದೆ ಎಂದರು. ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲದ ಬಗ್ಗೆ ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಹಾಗಾಗಿ […]

ಬಡವರ್ಗಕ್ಕೆ ಆರ್ಥಿಕ ನೆರವು ನೀಡುವ ಮುಂಚೂಣಿ ಸಂಘಟನೆ ಬಿರುವೆರ್ ಕುಡ್ಲ

Tuesday, December 1st, 2020
ಬಡವರ್ಗಕ್ಕೆ ಆರ್ಥಿಕ ನೆರವು ನೀಡುವ ಮುಂಚೂಣಿ ಸಂಘಟನೆ ಬಿರುವೆರ್ ಕುಡ್ಲ

ಮಂಗಳೂರು : ಕಳೆದ ಆರು ವರ್ಷಗಳಲ್ಲಿ ಜಾತಿ ಬೇದವಿಲ್ಲದೆ ನೂರಾರು ಕುಟುಂಬಗಳಿಗೆ 1.80 ಕೋಟಿಗೂ ಮಿಕ್ಕಿ ಆರ್ಥಿಕ  ನೆರವು ನೀಡುವ ಮೂಲಕ ಅಲ್ಪಾವಧಿಯಲ್ಲಿ ಫ್ರೆಂಡ್ಸ್ ಬಳ್ಳಾಲ್ಬಾಗ್ ಬಿರುವೆರ್ ಕುಡ್ಲ ಸಂಘಟನೆ ಮುಂಚೂಣಿಯಲ್ಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರಿನಲ್ಲಿ ಸಂಘಟನೆ ವತಿಯಿಂದ ಮೂರು ಕುಟುಂಬಗಳಿಗೆ ಆರ್ಥಿಕ  ನೆರವು ವಿತರಿಸಿ ಮಾತನಾಡಿದರು. ಶಾಸಕ ಡಾ.ಭರತ್ ಶೆಟ್ಟಿ ವೈ ಮಾತನಾಡಿ, ಅನಾರೋಗ್ಯ ಪೀಡಿತರಿಗೆ, ಮಕ್ಕಳ ಶಿಕ್ಷಣಕ್ಕಾಗಿ, ಅಂಗವಿಕಲರಿಗೆ ಸಲಕರಣೆ ಸಹಿತ ಹಲವು ಸೌಲಭ್ಯವನ್ನು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸಹಿತ ಎಲ್ಲಾ […]

ಲೇಡಿಹಿಲ್ ವೃತ್ತಕ್ಕೆ ಬ್ರಹ್ಮ ಶ್ರೀನಾರಾಯಣ ಗುರುಗಳ ಹೆಸರು ನಾಮಕರಣ ಮಾಡಲು ಮನವಿ

Tuesday, September 15th, 2020
Biruver Kudla

ಮಂಗಳೂರು  : ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಕೇಂದ್ರೀಯ ಸಮಿತಿ ವತಿಯಿಂದ  ಲೇಡಿಹಿಲ್ ವೃತ್ತಕ್ಕೆ ಬ್ರಹ್ಮ ಶ್ರೀನಾರಾಯಣ ಗುರುಗಳ ಹೆಸರು ನೀಡಬೇಕು ಎಂದು ಮಂಗಳೂರು ಮಹಾ ನಗರ ಪಾಲಿಕೆ ಮೇಯರ್ ದಿವಾಕರ್ ಅವರಿಗೆ ಮತ್ತು ಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಅವರಿಗೆ  ಮನವಿ ನೀಡಲಾಯಿತು. ಮನವಿಯನ್ನು ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಅವರಿಗೆ ಈ ಮೊದಲೇ ಬಗ್ಗೆ 2018 ಕ್ಕೆ ಮನವಿಯನ್ನು ನೀಡಿದ್ದೇವೆ. ಈಗ ಮತ್ತೊಮ್ಮೆ ಮರು ಮನವಿಯನ್ನು ಶಾಸಕರಿಗೆ ನಮ್ಮ ಸಂಸ್ಥೆಯ ವತಿಯಿಂದ ನೀಡಿದ್ದೇವೆ […]