ರಸ್ತೆ ಕಾಮಗಾರಿ ಕಳಪೆ : ಸೂಕ್ತ ಕ್ರಮಕ್ಕೆ ಮಡಿಕೇರಿ ರಕ್ಷಣಾ ವೇದಿಕೆ ಒತ್ತಾಯ

Friday, January 31st, 2020
road

ಮಡಿಕೇರಿ : ನಗರದ ರಾಣಿಪೇಟೆಯಿಂದ ಮುತ್ತಪ್ಪ ದೇವಾಲಯದ ರಸ್ತೆಯನ್ನು ಇತ್ತೀಚೆಗಷ್ಟೇ ಡಾಮರೀಕರಣಗೊಳಿಸಲಾಗಿದ್ದು, ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿರುವ ಮಡಿಕೇರಿ ರಕ್ಷಣಾ ವೇದಿಕೆ, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದಂತೆ ಒತ್ತಾಯಿಸಿದೆ. ಕಾಮಗಾರಿ ನಡೆದ ಒಂದೇ ವಾರದಲ್ಲಿ ರಸ್ತೆ ಕಿತ್ತು ಬರುತ್ತಿದ್ದು, ಸಾರ್ವಜನಿಕರ ಹಣ ಪೋಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ವೇದಿಕೆಯ ಅಧ್ಯಕ್ಷ ಅಚ್ಚಾಂಡಿರ ಪವನ್ ಪೆಮ್ಮಯ್ಯ ಹಾಗೂ ಪ್ರಮುಖರು ಗುತ್ತಿಗೆದಾರರ ಬಿಲ್ ಗೆ ಅನುಮೋದನೆ ನೀಡಬಾರದು, ಕಾಮಗಾರಿ ಉಸ್ತವಾರಿ ವಹಿಸಿದ ನಗರಸಭೆಯ ಇಂಜಿನಿಯರ್ […]

ಮಹಾನಗರಪಾಲಿಕೆ ಕಾಮಗಾರಿ-ಗುತ್ತಿಗೆದಾರರಿಗೆ ಕಾಲಮಿತಿಯಲ್ಲಿ ಬಿಲ್ ಪಾವತಿಸಿ-ಶ್ರೀ ಜೆ.ಕೃಷ್ಣ ಪಾಲೇಮಾರ್

Saturday, April 23rd, 2011
ಜೆ.ಕೃಷ್ಣ ಪಾಲೇಮಾರ್

ಮಂಗಳೂರು : ಮಂಗಳೂರು ನಗರದಲ್ಲಿ ಮೂಲಭೂತ ಸೌಲಭ್ಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮಾನ್ಯ ಮುಖ್ಯ ಮಂತ್ರಿಗಳು ನೀಡಿರುವ ವಿಶೇಷ ಅನುದಾನದಡಿಯಲ್ಲಿ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಗುತ್ತಿಗೆದಾರರಿಗೆ ಕಾಮಗಾರಿ ಪೂರ್ಣಗೊಂಡ   20 ದಿನಗಳೊಳಗೆ ಬಿಲ್ಲಿನ ಹಣ ಪಾವತಿ ಮಾಡುವಂತೆ ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ,ಮೀನುಗಾರಿಕೆ,ಪರಿಸರ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣ ಜೆ.ಪಾಲೇಮಾರ್ರವರು ಸೂಚಿಸಿದ್ದಾರೆ. ಅವರು  ನಿನ್ನೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಈ ವಿಷಯ ತಿಳಿಸಿದರು. […]