ಬಿಲ್ಲವರ ಅಸೋಷಿಯೇಶನ್ ಮುಂಬಯಿ, 166ನೇ ಶ್ರೀ ನಾರಾಯಣ ಗುರುಜಯಂತಿ ಆಚರಣೆ

Saturday, September 5th, 2020
billavaMumbai

ಮುಂಬಯಿ : ಮಹಾನಗರದ ಪ್ರತಿಷ್ಠಿತ ಜಾತೀಯ ಸಂಘಟನೆಗಳಲ್ಲೊಂದಾದ ಬಿಲ್ಲವರ ಅಸೋಷಿಯೇಶನ್ ಮುಂಬಯಿ, ಇದರ ವತಿಯಿಂದ ಸಂತಾಕ್ರೂಸ್ ಪೂರ್ವದ ಬಿಲ್ಲವ ಭವನದಲ್ಲಿ ಶ್ರೀ ನಾರಾಯಣ ಗುರುಗಳ 166 ಜಯಂತಿಯನ್ನು ಸೆ. 2ರಂದು ಆಚರಿಸಲಾಯಿತು. ನಾರಾಯಣ ಗುರುಗಳ ನಾಮಸ್ಮರಣೆ, ಭಜನೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಮಧ್ಯಾಹ್ನ ನಡೆದ ಮಹಾಪೂಜೆಯನ್ನು ಬಿಲ್ಲವರ ಅಸೋಷಿಯೇಶನ್ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ಶಾಂತಿಯವರು ನೆರವೇರಿಸಿದರು. ಬಿಲ್ಲವರ ಅಸೋಷಿಯೇಶನ್ ನ ಅಧ್ಯಕ್ಷರಾದ ಚಂದ್ರಶೇಖರ ಪೂಜಾರಿ ಯವರ ಅಧ್ಯಕ್ಷರೆಯಲ್ಲಿ ನಡೆದ ಈ ಸರಳ […]

ಭಾರತ್ ಬ್ಯಾಂಕ್, ನೂತನ ಕಾರ್ಯಾಧ್ಯಕ್ಷರಾಗಿ ಉಪ್ಪೂರು ಶಿವಾಜಿ ಪೂಜಾರಿ ಆಯ್ಕೆ

Monday, August 17th, 2020
shivaji-Poojary

ಮುಂಬಯಿ : ಮಹಾನಗರದ ಬಿಲ್ಲವರ ಅಸೋಷಿಯೇಶನ್ ಪ್ರಾಯೋಜಕತ್ವದ ಪ್ರತಿಷ್ಟಿತ ಭಾರತ್ ಕೋ ಅಪರೇಟಿವ್ ಬ್ಯಾಂಕಿನ ನೂತನ ಕಾರ್ಯಧ್ಯಕ್ಷರಾಗಿ ಉಪ್ಪೂರು ಶಿವಾಜಿ ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ಬ್ಯಾಂಕಿಗ್ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಇವರು ಭಾರತ್ ಬ್ಯಾಂಕಿನ ನಿರ್ದೇಶಕರಾಗಿ ಧೀರ್ಘಕಾಲ ಸೇವೆ ಸಲ್ಲಿಸಿರುವರು. ಬ್ಯಾಂಕಿನ ಕಾಯ್ಯಾಧ್ಯಕ್ಷರಾದ ಜಯ ಸಿ ಸುವರ್ಣ ಇವರ ಉಪಸ್ಥಿತಿಯಲ್ಲಿ ಆಗಸ್ಟ್ 16ರಂದು ಬ್ಯಾಂಕಿನ ಕೇಂದ್ರ ಕಾರ್ಯಾಲಯದಲ್ಲಿ ಜರಗಿದ ಆಡಳಿತ ಮಂಡಳಿಯ ಸಭೆಯಲ್ಲಿ ಉಪ್ಪೂರು ಶಿವಾಜಿ ಪೂಜಾರಿ ಯವರನ್ನು ಆಯ್ಕೆಮಾಡಲಾಯಿತು. ಬ್ಯಾಂಕಿನ ಕಾರ್ಯಧ್ಯಕ್ಷರಾಗಿ ಸುದೀರ್ಘಕಾಲ ಅಧಿಕಾರ ವಹಿಸಿಕೊಂಡಿದ್ದು […]