ಬಿ.ಜೆ.ಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಯುವನಾಯಕ ವಜ್ರನಾಥ ಪಿ ಆಯ್ಕೆ

Tuesday, July 26th, 2016
Vajranatha-P

ಬಂಟ್ವಾಳ: ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಯುವನಾಯಕ ಕಲ್ಲಡ್ಕ ಮಡ್ಲಮಜಲು ವಜ್ರನಾಥ ಪಿ. ಆವರು ಆಯ್ಕೆಯಾಗಿರುತ್ತಾರೆ. ಇವರು ಅನೇಕ ಸಾರ್ವಜನಿಕ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅಲ್ಲದೆ ಪಕ್ಷದಲ್ಲಿ ಸುಮಾರು 20 ವರ್ಷಗಳಿಂದ ಸಾಮಾನ್ಯ ಕಾರ್ಯಕರ್ತನಾಗಿ ದುಡಿದು ವಾರ್ಡು ಸಮಿತಿಯ ಅಧ್ಯಕ್ಷನಾಗಿ, ಗೋಳ್ತಮಜಲು ಪಂಚಾಯತ್ ಸಮಿತಿಯ ಅಧ್ಯಕ್ಷನಾಗಿ, ಕಲ್ಲಡ್ಕ ಶಾರದ ಪೂಜಾ ಉತ್ಸವ ಸಮಿತಿಯ ಉಪಾಧ್ಯಕ್ಷನಾಗಿ, ಶ್ರೀ ಗುರೂಜಿ ಸೇವಾ ಸಂಘದ ಸಕ್ರೀಯ ಸದಸ್ಯನಾಗಿರುತ್ತಾರೆ. ಇದೀಗ ಬಿ.ಜೆ.ಪಿ ಯುವ ಮೋರ್ಚಾದ ಅಧ್ಯಕ್ಷ ಪದವಿಯನ್ನು ಅರ್ಹವಾಗಿಯೇ ಪಡೆದಿರುತ್ತಾರೆ. […]

ಮುಖ್ಯಮಂತ್ರಿಯವರ ನಿರೀಕ್ಷೆಯಲ್ಲೇ ಕೊನೆಯುಸಿರೆಳೆದ ಐತ ಕೊರಗ

Wednesday, February 3rd, 2016
Itha Koraga

ಉಪ್ಪಳ: ಮುಖ್ಯಮಂತ್ರಿಯವರ ಸಹಾಯದ ನಿರೀಕ್ಷೆಯಲ್ಲೇ ಬಹುಕಾಲ ಶರಶಯ್ಯೆಯಲ್ಲಿದ್ದ ವ್ಯಕ್ತಿಯೋರ್ವರು ಕೊನೆಗೂ ಹುಸಿ ನಿರೀಕ್ಷೆಯೊಂದಿಗೆ ಇಹ ತ್ಯಜಿಸಿದ ಘಟನೆ ಬಾಯಾರು ದಳಿಕುಕ್ಕು ಕೊಲೋನಿಯಲ್ಲಿ ನಡೆದಿದೆ. ಪೈವಳಿಕೆ ಬಾಯಾರು ಸಮೀಪದ ದಳಿಕುಕ್ಕು ಕೊರಗ ಕೊಲೋನಿಯ ಐತ ಕೊರಗ ಸುಧೀರ್ಘ ಕಾಲಗಳಿಂದ ಪಾರ್ಶ್ವವಾಯು ಪೀಡಿತರಾಗಿ ಸೂಕ್ತ ಚಿಕಿತ್ಸೆಗೆ ಅನುಕೂಲವಿಲ್ಲದೆ ಸಂಕಷ್ಟದಲ್ಲಿದ್ದರು. ಇವರೀಗ ಕಳೆದ ಜ.28ರಂದು ರೋಗ ಉಲ್ಬಣಗೊಂಡು ಅಸುನೀಗಿದರು. ಐತರ ಪತ್ನಿ ಗಿರಿಜಾ ಆಸ್ಮ ರೋಗಿಯಾಗಿ ದೃಷ್ಟಿ ದೋಷವೂ ಬಾಧಿಸಿ ನಿತ್ರಾಣರಾಗಿದ್ದಾರೆ. ಇವರ ಒಂದು ಕಣ್ಣಿಗೆ ಇತ್ತೀಚೆಗೆ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಗಿತ್ತು. […]