ನಾಮಪತ್ರ ಸಲ್ಲಿಸುವ ಮುನ್ನ ಜನಾರ್ದನ ಪೂಜಾರಿಯಿಂದ ಆಶೀರ್ವಾದ ಪಡೆದ ರೈ

Wednesday, April 18th, 2018
janardhan

ಮಂಗಳೂರು: ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ನಾಮಪತ್ರ ಸಲ್ಲಿಸುವುದಕ್ಕೆ ಪೂರ್ವಭಾವಿಯಾಗಿ ಇಂದು ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ಸಚಿವರೂ ಆಗಿರುವ ಜನಾರ್ದನ ಪೂಜಾರಿಯವರ ನಿವಾಸಕ್ಕೆ ತೆರಳಿ ಅವರ ಆಶೀರ್ವಾದ ಪಡೆದರು. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಳಿವೇ ಇಲ್ಲ, ಜಿಲ್ಲೆಯಲ್ಲಿ ಎಲ್ಲ ಸ್ಥಾನಗಳನ್ನು ಕಾಂಗ್ರೆಸ್ ಪಡೆಯುವುದರೊಂದಿಗೆ ರಾಜ್ಯದಲ್ಲೂ ಅತೀ ಹೆಚ್ಚಿನ ಸ್ಥಾನ ಗಳಿಸುತ್ತದೆ. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಪೂಜಾರಿಯವರು ಇದೇ ವೇಳೆ ನುಡಿದರು. ರೈ ಅವರೇ ನಿಮ್ಮಂಥ […]

ಮಂಗಳೂರು ಬೃಹತ್ ಉದ್ಯೋಗ ಮೇಳ

Saturday, February 17th, 2018
udyoga-mela

ಮಂಗಳೂರು :ಮಂಗಳೂರು ಬೃಹತ್ ಉದ್ಯೋಗ ಮೇಳಕ್ಕೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸುವಾರಿ ಸಚಿವ ಬಿ ರಮಾನಾಥ್ ರೈ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಇಂದು ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಉದ್ಯೋಗ ಮೇಳವು ಅನೇಕ ನಿರುದ್ಯೋಗಿಗಳ ಬಾಳಲ್ಲಿ ನವಚೇತನವನ್ನು ಮೂಡಿಸುವ ಕೆಲಸವನ್ನು ಮಾಡುವುದರಿಂದ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಅವರವರ ನೈಪುಣ್ಯತೆ ಹಾಗೂ ಪ್ರತಿಭೆಗಳಿಗೆ ಸಂಬಂಧಪಟ್ಟು ನಡೆಯುತ್ತದೆ ಬದಲಾಗಿ ಯಾವುದೇ ಅಂಕಗಳು ಇಲ್ಲಿ […]