ಹೆಂಡತಿಯನ್ನು ತವರುಮನೆಗೆ ಬಿಟ್ಟು, ನಾದಿನಿಯನ್ನು ಕರೆದುಕೊಂಡು ಹೋದ ಪತಿ

Saturday, July 10th, 2021
Muslim Couple

ಬೆಳ್ತಂಗಡಿ:  ವ್ಯಕ್ತಿಯೊಬ್ಬ, ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ಆಕೆಯ ಸಹೋದರಿಯನ್ನು ಕರೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಮಹಿಳೆಯ ತಂದೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾಲ್ಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರಿಯನ್ನು ಮುಸ್ತಫಾ ಎಂಬ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿ–ಪತ್ನಿಯ ನಡುವೆ ಮನಸ್ತಾಪ ಉಂಟಾಗಿ, ಪತ್ನಿ ತವರು ಮನೆಗೆ ಬಂದು ಉಳಿದಿದ್ದಳು. ಗುರುವಾರ ತಾಯಿಯೊಂದಿಗೆ ಮಾವನ ಮನೆಗೆ ಬಂದ ಮುಸ್ತಫಾ, ನಾದಿನಿಯನ್ನು ಕರೆದುಕೊಂಡು ಹೋಗಿದ್ದು, ಕಿರಿಯ ಪುತ್ರಿ ಮನೆಗೆ ಬಂದಿಲ್ಲವೆಂದು ತಂದೆ […]

ಸೌಜನ್ಯ ಕೊಲೆ ಪ್ರಕರಣ: ಸಿಬಿಐ ವಿಶೇಷ ತನಿಖೆಗೆ ಸೌಜನ್ಯ ಪೋಷಕರ ಸ್ವಾಗತ

Wednesday, February 15th, 2017
Soujanya-case

ಮಂಗಳೂರು: ಸೌಜನ್ಯಳ ಅಸಹಜ ಸಾವಿನ ಪ್ರಕರಣವನ್ನು ಮರುತನಿಖೆಗೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿರುವುದನ್ನು ಮೃತಳ ಪೋಷಕರು ಸ್ವಾಗತಿಸಿದ್ದಾರೆ. ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಮೂವರನ್ನು ತನಿಖೆಗೊಳಪಡಿಸಿದರೆ ಪ್ರಕರಣಕ್ಕೆ ನ್ಯಾಯ ಸಿಗುತ್ತದೆ ಎಂದು ಆಕೆಯ ತಾಯಿ ಕುಸುಮಾವತಿ ಆಶಾವಾದ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಳ ಪ್ರಕರಣ ಆರಂಭದಿಂದಲೇ ಸರಿಯಾಗಿ ತನಿಖೆಯಾಗಿರಲಿಲ್ಲ. ರಾತ್ರಿಯಾದರೂ ಮನೆಗೆ ಬಾರದ ಮಗಳನ್ನು ಅಂದು ಸಾಕಷ್ಟು ಹುಡುಕಲಾಗಿತ್ತು. ಆದರೆ, ಮರುದಿನ ಹುಡುಕಾಡಿದ ಜಾಗದಲ್ಲೇ ಅಂದರೆ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಕೂಗಳತೆ ದೂರದಲ್ಲೇ […]

ವಾಕಿಂಗ್ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವು

Tuesday, December 20th, 2016
Dinakar-hegde

ಮಂಗಳೂರು: ವಾಕಿಂಗ್ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ವಾಹನ ಡಿಕ್ಕಿಯಿಂದ ಶಿಕ್ಷಕ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕ ದಿನಕರ್‌ ಹೆಗ್ಡೆ (48) ಮೃತ ದುರ್ದೈವಿ. ಎಂದಿನಂತೆ ದಿನಕರ್‌‌ ಹೆಗ್ಡೆ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಯಮಸ್ವರೂಪಿಯಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ […]