ಬಾಡಿಗೆ ಮನೆ ಕೇಳುವ ನೆಪದಲ್ಲಿ ಚಿನ್ನಾಭರಣ ಲೂಟಿ : ಆರೋಪಿಯ ಬಂಧನ

Tuesday, March 23rd, 2021
Mujeeb

ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಮ ಮತ್ತು ನಿತ್ಯಾನಂದ ನಗರದ ಮನೆಗಳಿಗೆ ನುಗ್ಗಿ 1.40 ಲಕ್ಷ ರೂ. ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಸೊತ್ತು ಸಹಿತ ಪೊಲೀಸರು ಕಾಸರಗೋಡು ಜಿಲ್ಲೆಯ ನರಿಂಗಾನ ಗ್ರಾಮದ ನೆತ್ತಿಲಪದವು ಎಂಬಲ್ಲಿ ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ, ಮಂಗಲ್ಪಾಡಿ ನಿವಾಸಿ ಮುಜೀಬ್ ರೆಹಮಾನ್ ಎಂ.ಎ. ಬಂಧಿತ ಆರೋಪಿ. ಬಾಡಿಗೆ ಮನೆ ಕೇಳಿಕೊಂಡು ಬೆಳ್ಮ ಮತ್ತು ನಿತ್ಯಾನಂದ ನಗರದ ಅಶ್ವಿನಿ ಎಂಬವರ ಮನೆಗೆ ಹೋಗಿದ್ದನು. ಆರೋಪಿ ಮುಜೀಬ್ ಬಳಿಕ […]

ಸಹೋದರರಿಬ್ಬರ ಕಲಹ ಕೊಲೆಯಲ್ಲಿ ಅಂತ್ಯ

Tuesday, December 4th, 2012
Man killed by younger brother

ಮಂಗಳೂರು :ಕೊಣಾಜೆ ಠಾಣಾ ವ್ಯಾಪ್ತಿಯ ಬೆಳ್ಮ ಗ್ರಾಮದ ಬರುವ ಎಂಬಲ್ಲಿ ಇಂದು ಬೆಳಗಿನ ಜಾವ ಅಣ್ಣನು ತಮ್ಮನಿಂದ ಕೊಲೆಯಾದ ಘಟನೆ ವರದಿಯಾಗಿದೆ. ಪ್ರವೀಣ್ ಡಿಸೋಜಾ ಮೃತ ವ್ಯಕ್ತಿಯಾಗಿದ್ದು, ಈತನ ಸಹೋದರ ನವೀನ್ ಎಂಬಾತ ಕಬ್ಬಿಣದ ಸರಳಿನಿಂದ ಹೊಡೆದು ಕೊಲೆ ಮಾಡಿದ್ದಾನೆನ್ನಲಾಗಿದೆ. ನವೀನ್ ನಗರದ ಕಾಲೇಜ್ ಒಂದರ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದು ನಿತ್ಯ ಬೆಳಗ್ಗೆ 5 ಗಂಟೆಯ ವೇಳೆಗೆ ಕೆಲಸಕ್ಕೆ ತೆರಳುತ್ತಿದ್ದನು ಆದರೆ ಅಣ್ಣ ಪ್ರವೀಣ್ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದು ನಿತ್ಯ ಜಗಳವಾಡುತ್ತಿದ್ದ ಎನ್ನಲಾಗಿದೆ. […]