ನಟ ಸಂಚಾರಿ ವಿಜಯ್‌ ಅಂಗ ಜೋಡಣೆಯಿಂದ ಮರು ಜೀವ ಪಡೆದ ಮೂವರು ಅದೃಷ್ಟ ವಂತರು

Tuesday, June 15th, 2021
Sanchari-Vijay

ಬೆಂಗಳೂರು: ಬೈಕ್‌ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್‌ ಅವರ ಅಂಗಾಂಗಗಳನ್ನು  ಅಗತ್ಯ ಇರುವವರಿಗೆ ನೀಡುವ ಕುಟುಂಬಸ್ಥರು  ದಾನ ಮಾಡಿದ್ದಾರೆ. ವಿಜಯ್‌ ಅವರ ಮೂತ್ರಪಿಂಡಗಳನ್ನು ಲಗ್ಗೆರೆ ಮೂಲದ 34 ವರ್ಷದ ಮಹಿಳೆಯೊಬ್ಬರಿಗೆ ಚಿಕಿತ್ಸೆ ಮೂಲಕ ಜೋಡಣೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ವಿಜಯ್‌ ಅವರ ಬ್ಲಡ್ ಗ್ರೂಪ್ , ಡಿ ಎನ್ ಎ , ಕಿಡ್ನಿ ಸೈಜ್ ಎಲ್ಲವೂ ಮಹಿಳೆಗೆ ಮ್ಯಾಚ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ […]

ಸಂಚಾರಿ ವಿಜಯ್‌ಗೆ ಕೋಮಾದಲ್ಲಿ, ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು

Monday, June 14th, 2021
Sanchari Vijay

ಬೆಂಗಳೂರು : ಬೈಕ್ ಅಪಘಾತಕ್ಕೀಡಾಗಿ ನಟ ಸಂಚಾರಿ ವಿಜಯ್ ಕೋಮಾದಲ್ಲಿ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯ  ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೂಲತಃ ರಂಗಭೂಮಿ ಕಲಾವಿದರಾಗಿರುವ ಸಂಚಾರಿ ವಿಜಯ್, ‘ನಾನು ಅವನಲ್ಲ, ಅವಳಲ್ಲ’ ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಸಿನಿಮಾ ಜೊತೆಯಲ್ಲಿ `ಉಸಿರು’ ಹೆಸರಿನ ತಂಡವನ್ನು ಕಟ್ಟಿಕೊಂಡು ಲಾಕ್‍ಡೌನ್ ನಲ್ಲಿ ಸಂಕಷ್ಟ ಸಿಲುಕಿದವರಿಗೆ ಸಹಾಯ ಮಾಡುತ್ತಿದ್ದರು. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ಶನಿವಾರ ರಾತ್ರಿ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ […]

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಸಾವು

Thursday, March 25th, 2021
Sanu

ಮಂಗಳೂರು : ನೇತ್ರಾವತಿ ಸೇತುವೆಯ ಮೇಲೆ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಡಬ ನಿವಾಸಿ, ವಿದ್ಯಾರ್ಥಿ ಮಾರ್ಚ್ 24 ರ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ಕಡಬ ತಾಲ್ಲೂಕಿನ ಮರ್ದಳ ಬಳಿಯ ಕೆಮ್ಮಾಯಿ ನಿವಾಸಿ ಸಾನು ಅಬ್ರಹಾಂ (21) ಅವರ ಬೈಕು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಅವರು ತೀವ್ರವಾಗಿ ಗಾಯಗೊಂಡಿದ್ದರು. ಸಾನು ಅಬ್ರಹಾಂ ನಗರದ ಖಾಸಗಿ ಹೋಟೆಲ್ ಮಾನೆಜ್‌ಮೆಂಟ್‌ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಮೃತಪಟ್ಟ […]

ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು : ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

Saturday, March 14th, 2020
kushal

ಮಂಗಳೂರು : ನಗರದ ಬಿಜೈ ಬಳಿ ಬೈಕ್ ಸ್ಕಿಡ್‌ನಿಂದಾಗಿ ಗಂಭೀರ ಗಾಯಗೊಂಡ ನಗರದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಾಮನಗರ ಜಿಲ್ಲೆಯ ಕುಶಾಲ್ ಕುಮಾರ್ (19) ಮೃತಪಟ್ಟ ವಿದ್ಯಾರ್ಥಿ. ಗುರುವಾರ ಬೆಳಗ್ಗೆ ಕುಶಾಲ್ ಅವರು ತನ್ನ ಪಿಜಿಯಿಂದ ಬೈಕ್‌ನಲ್ಲಿ ಜಿಮ್‌ಗೆ ಹೋಗುತ್ತಿದ್ದಾಗ ಬಿಜೈ-ಕೆಎಸ್ಸಾರ್ಟಿಸಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿದೆ. ಇದರ ಪರಿಣಾಮ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ […]

ಉಪ್ಪಿನಂಗಡಿ : ಬೈಕ್ ಅಪಘಾತದಲ್ಲಿ 9ನೇ ತರಗತಿ ವಿದ್ಯಾರ್ಥಿ ಮೃತ್ಯು

Thursday, November 28th, 2019
Kiran

ಉಪ್ಪಿನಂಗಡಿ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪದಲ್ಲಿ ನಡೆದ ಬೈಕೊಂದು ಸ್ಕಿಡ್ ಆಗಿ ರಸ್ತೆಗುರುಳಿದ ಪರಿಣಾಮ ಸಹ ಸವಾರ ಶಾಲಾ ಬಾಲಕ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕೋಲ್ಪೆ ನಿವಾಸಿ ಗಿರಿಯಪ್ಪ ಎಂಬವರ ಪುತ್ರ ನೆಲ್ಯಾಡಿ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಕಿರಣ್ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಿರಣ್‍ಗೆ ನೆಲ್ಯಾಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರಗೆ ಕರೆದೊಯ್ಯುತ್ತಿದ್ದ […]