ಕೂಲ್ ಡ್ರಿಂಕ್ಸ್ ಬಾಟಲಿಯ ಬಾಕ್ಸ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವು

Saturday, May 8th, 2021
Prasjanth

ಮಂಗಳೂರು : ರಸ್ತೆಯಲ್ಲಿ ಅಡ್ಡ ದಾಟುತ್ತಿದ್ದ ಸ್ಕೂಟರ್‌ ಗೆ   ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ  ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಪದವಿನಂಗಡಿಯಲ್ಲಿ ನಡೆದಿದೆ. ಮೃತನನ್ನುಕೆಪಿಟಿ ಸಮೀಪದ  ಶರಬತ್ ಕಟ್ಟೆ ನಿವಾಸಿ ಪ್ರಶಾಂತ್ (30) ಎಂದು ಗುರುತಿಸಲಾಗಿದೆ. ಪ್ರಶಾಂತ್ ನಗರದ ಹೊರವಲಯದಲ್ಲಿರುವ ನೀರು ಮಾರ್ಗದ ಚೇತನಾ ಎಂಟರ್‌ಪ್ರೈಸಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಬೋಂದೆಲ್ ಕಡೆಯಿಂದ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡ ದಾಟುತ್ತಿದ್ದ ಸ್ಕೂಟರ್‌ ಗೆ   ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಂಗಡಿಯೊಂದರ ಕೂಲ್ ಡ್ರಿಂಕ್ಸ್ ಬಾಟಲಿಯ ಬಾಕ್ಸ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು […]

ಬೆಕ್ಕಿನ ಜೀವ ಉಳಿಸಲು ಹೋದ ಬೈಕ್ ಸವಾರನ ಮೇಲೆ, ಕಾರು ಹರಿದು ಸಾವು

Wednesday, March 24th, 2021
Jishnu

ಕಾಸರಗೋಡು :  ಬೈಕ್ ಸವಾರರನ ಮೇಲೆ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ಕಾಞ೦ಗಾಡ್ ನ ಅಲಾಮಿಪಳ್ಳಿ ಯಲ್ಲಿ ಮಾ.24ರ ಬುಧವಾರ ನಡೆದಿದೆ. ಘಟನೆಯಿಂದ ಸಹ ಸವಾರ ಗಾಯಗೊಂಡಿದ್ದಾನೆ . ನೀಲೇಶ್ವರ ಅಂಬಲತ್ತರ ದ ಜಿಷ್ಣು (24) ಮೃತಪಟ್ಟ ಸವಾರ. ಸಹ ಸವಾರ ರಂಜಿತ್ ಗಾಯ ಗೊಂಡಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ . ಅಡ್ಡ ಬಂದ ಬೆಕ್ಕನ್ನು ತಪ್ಪಿಸಲೆತ್ನಿಸಿದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಾಗ ಹಿಂಬದಿಯಿಂದ ಬಂದ ಕಾರು ಮೇಲೆ ಹರಿದು ಗಂಭೀರ ಗಾಯಗೊಂಡಿದ್ದ ರೆನ್ನಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ […]

ಸೈಡ್ ಕೊಡಲಿಲ್ಲ ಎಂದು ಬಸ್ ಚಾಲಕನ ಮೇಲೆ ಪೆಟ್ರೋಲ್ ಎರಚಿದ ಬೈಕ್ ಸವಾರ

Tuesday, January 19th, 2021
Petrol attack

ಮಂಗಳೂರು :  ಸೈಡ್ ಕೊಡುವ ವಿಚಾರವಾಗಿ ನಗರದ ಪಡೀಲ್ ಫೈಸಲ್ ನಗರ ಎಂಬಲ್ಲಿ ಬೈಕ್ ಸವಾರನೊಬ್ಬ ಬಸ್ ಚಾಲಕನ ಮೇಲೆ ಪೆಟ್ರೋಲ್ ಎರಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಚಾಲಕ ಹಾಗೂ ಬೈಕ್ ಸವಾರನ ನಡುವೆ ಘರ್ಷಣೆ ನಡೆದಿದೆ. ವಾಹನಗಳಿಗೆ ಸೈಡ್ ಕೊಡುವ ವಿಚಾರವಾಗಿ ಘರ್ಷಣೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿಲ್ಲ ಎಂಬುವುದಾಗಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ […]

ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Friday, December 11th, 2020
shankara Narayana

ವಿಟ್ಲ: ಕೆಎಸ್ ಆರ್ ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಾವನ್ನಪ್ಪಿದ್ದಾರೆ. ವಿಟ್ಲ ನೆತ್ರಕೆರೆ ನಿವಾಸಿ ಶಂಕರನಾರಾಯಣ ಭಟ್ (58) ಸಾವನ್ನಪ್ಪಿದ್ದು, ಅವರು ಗುರುವಾರ ತನ್ನ ಬೈಕಿನಲ್ಲಿ ವಿಟ್ಲಕ್ಕೆ ಆಗಮಿಸುತ್ತಿದ್ದಾಗ ಫರಂಗಿಪೇಟೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಂಟೈನರ್‌ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

Sunday, December 6th, 2020
Manvith

ಮಂಗಳೂರು : ಬೈಕ್ ಸವಾರ ಕಂಟೈನರ್‌ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ  ಸ್ಥಳದಲ್ಲೇ ಓರ್ವ ಮೃತಪಟ್ಟ ಘಟನೆ ರವಿವಾರ ಮಧ್ಯಾಹ್ನ ನಗರದ ಪಡೀಲ್‌ನಲ್ಲಿ ನಡೆದಿದೆ. ನೀರುಮಾರ್ಗದ ಮನ್ವಿತ್(22) ಮೃತ ಬೈಕ್‌ ಸವಾರ ಎಂದು ತಿಳಿದುಬಂದಿದೆ. ಕಂಟೈನರ್ ನಂತೂರು ಕಡೆಯಿಂದ ಪಡೀಲ್‌ನತ್ತ ಸಂಚರಿಸುತ್ತಿತ್ತು. ಈ ವೇಳೆ ಎದುರುಗಡೆಯಿಂದ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಂಟೈನರ್ ಅಡಿಗೆ ಬಿದ್ದಿದೆ ಎನ್ನಲಾಗಿದೆ. ಕಂಟೈನರ್ ಬೈಕ್ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಧ್ಯಾಹ್ನ 12 ಗಂಟೆ […]

ಮುಳ್ಳು ಹಂದಿ ದಾಳಿ ನಡೆಸಿ ಬೈಕ್​ ಸವಾರನಿಗೆ ಗಾಯ

Wednesday, June 10th, 2020
hedgehog

ಮಂಗಳೂರು: ಬೈಕ್ನಲ್ಲಿ ಸ್ನೇಹಿತನ ಜೊತೆ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. 16 ವರ್ಷದ ಶಫೀಕ್ ಮುಳ್ಳುಹಂದಿಯಿಂದ ದಾಳಿ ಗಾಯಗೊಂಡ ಯುವಕ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಶಫೀಕ್ ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ. ಈ ವೇಳೆ ಇದ್ದಕ್ಕಿದ್ದಂತೆ ಬಂದ ಮುಳ್ಳುಹಂದಿ ಬೈಕ್‌ನಲ್ಲಿ ತೆರಳುತ್ತಿದ್ದವರ ಮೇಲೆ ದಾಳಿ ಮಾಡಿದೆ. ಹೀಗಾಗಿ ಶಫೀಕ್‌ನ ಕಾಲಿಗೆ ಮುಳ್ಳುಹಂದಿಯ ಮುಳ್ಳುಗಳು […]

ನಾರಾವಿ : ಬೈಕ್-ಲಾರಿ ಅಪಘಾತದಲ್ಲಿ ಬೈಕ್ ಸವಾರ ಸಾವು

Wednesday, June 26th, 2019
pradeep

ಬೆಳ್ತಂಗಡಿ : ಬುಧವಾರ ಬೆಳಗ್ಗೆ ಸಂಭವಿಸಿದ  ಬೈಕ್ ಹಾಗೂ ಲಾರಿ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದೆ . ಮೃತರನ್ನು ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಕರಿಯ ಪೂಜಾರಿ ಎಂಬವರ ಪುತ್ರ ಪ್ರದೀಪ್ (18) ಎಂದು ಗುರುತಿಸಲಾಗಿದೆ. ಇವರು ಬುಧವಾರ ಬೆಳಗ್ಗೆ ತನ್ನ ಬೈಕಿನಲ್ಲಿ ಸಹೋದರನನ್ನು ನಾರಾವಿಗೆ ಬಿಟ್ಟು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರಾಫಿಕ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರ

Friday, June 21st, 2019
Azar

ಮಂಗಳೂರು : ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದ ಬೈಕಿನ ಫೋಟೊ ತೆಗೆದ ಟ್ರಾಫಿಕ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸವಾರನೋರ್ವ ನಿಂದಿಸಿ ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮದನಿ ನಗರ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಫ್ಲೈಓವರ್ ಸಮೀಪ ಈತ ಹೆಲ್ಮೆಟ್ ಧರಿಸದೆ ಬೈಕಿನಲ್ಲಿ ಸಂಚರಿಸುತ್ತಿದ್ದನೆನ್ನಲಾಗಿದೆ. ಇದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿ ಸಂಗಣ್ಣ ಗೌಡ ಬೈಕಿನ […]

ಮಂಗಳೂರು: ಲಾರಿ ಡಿಕ್ಕಿ, ಬೈಕ್ ಸವಾರ‌ ಸ್ಥಳದಲ್ಲೇ ಮೃತ

Tuesday, June 11th, 2019
sidiq

ಮಂಗಳೂರು: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ, ನಗರದ ಹೊರವಲಯದ ಎಕ್ಕೂರು ಬಳಿ ಸೋಮವಾರ ಸಂಜೆ ಸಂಭವಿಸಿದೆ. ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಮೃತ ಬೈಕ್ ಸವಾರ‌. ಈತ ಬೈಕ್ನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಲ್ಲಿ ಬರುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ, ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಿದ್ದೀಕ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟದ್ದಾನೆ. ಸ್ಥಳಕ್ಕೆ ದಕ್ಷಿಣ ಠಾಣೆಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, […]

ನಂತೂರು ಆಕ್ಸಿಡೆಂಟ್ ಬೈಕ್ ಸವಾರ ಗಂಭೀರ

Tuesday, January 1st, 2019
Nanthoor Accident

ಮಂಗಳೂರು : ನಂತೂರು ಜಂಕ್ಷನ್‌ನಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರು ಸೋಮವಾರ ಸಂಜೆ  ಬೈಕೊಂದಕ್ಕೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೊಟ್ಟಾರ ನಿವಾಸಿ ಕೃಷ್ಣ ಆಚಾರ್ಯ ಗಾಯಗೊಂಡವರು. ಇವರು ಸೋಮವಾರ ಸಂಜೆ 4:30ರ ವೇಳೆಗೆ ಬೈಕ್‌ನಲ್ಲಿ ನಂತೂರಿನಿಂದ ಪಂಪ್‌ವೆಲ್ ಕಡೆಗೆ ಹೋಗುತ್ತಿದ್ದರು. ಕೇರಳ ನೋಂದಣಿಯ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಪಂಪ್‌ವೆಲ್‌ನಿಂದ ಕೆಪಿಟಿ ಕಡೆಗೆ ಬಂದು, ಬೈಕ್‌ಗೆ ಢಿಕ್ಕಿಯಾಗಿದೆ. ಇದರಿಂದ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ […]