ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್‌ ಮುಳುಗಡೆ, ಆರು ಮಂದಿ ನಾಪತ್ತೆ

Tuesday, December 1st, 2020
fishing Boat

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟ್‌ವೊಂದು ಕಡಲಲ್ಲಿ ಮುಳುಗಡೆಯಾಗಿದ್ದು, ಆರು ಮಂದಿ ನಾಪತ್ತೆಯಾದ ಘಟನೆ ಉಳ್ಳಾಲದ ಪಶ್ಚಿಮ ಭಾಗದಿಂದ ಕೆಲವೇ  ನಾಟಿಕಲ್‌ ಮೈಲಿ ದೂರದಲ್ಲಿ ನಡೆದಿದೆ. ಬೋಳಾರದ ಪ್ರಶಾಂತ ಎಂಬವರ ಮಾಲಕತ್ವದ “ಶ್ರೀರಕ್ಷಾ” ಹೆಸರಿನ ಬೋಟು ಸೋಮವಾರ ನಸುಕಿನಜಾವ ಮೀನುಗಾರಿಕೆಗೆ ತೆರಳಿತ್ತು.‌ ಬೋಟ್‌ನಲ್ಲಿ 25 ಮಂದಿ ಮೀನುಗಾರರು ತೆರಳಿದ್ದರು. ಕಡಲಲ್ಲಿ‌ ಭಾರೀ ಪ್ರಮಾಣದ ಮೀನು ಸಿಕ್ಕಿದ್ದು, ಸಂಜೆ 6:30ರ ಸುಮಾರಿಗೆ ಬಲೆಯನ್ನು ಮೇಲೆ‌‌ ಎಳೆಯುವಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೋಟ್ ನಲ್ಲಿ ಉಳ್ಳಾಲ, ಮಂಗಳೂರು […]

ಭಾರೀ ಮಳೆಗೆ ರಸ್ತೆ ಕುಸಿತದಿಂದ ಹಿಂದಿನ ಶತಮಾನದ ಬಾವಿ ಪ್ರತ್ಯಕ್ಷ

Friday, October 25th, 2019
puratana-bhavi

ಮಂಗಳೂರು : ಮಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆ ಕುಸಿತ ಆಗಿ ಶತಮಾನದ ಹಿಂದಿನ ಬಾವಿ ಪ್ರತ್ಯಕ್ಷವಾದ ಘಟನೆ ನಡೆದಿದೆ. ಮಂಗಳೂರಿನ ಬೋಳಾರದಲ್ಲಿರುವ ಲೀವೆಲ್ ಸರ್ಕಲ್ನಲ್ಲಿ ಈ ಘಟನೆ ನಡೆದಿದೆ. ದಶಕಗಳ ಹಿಂದೆ ಇಲ್ಲಿ ಬಾವಿಯನ್ನು ಮುಚ್ಚಲಾಗಿತ್ತು.ಅದರ ‌ಮೇಲೆ ಇದ್ದ ರಸ್ತೆ ನಿನ್ನೆ ಕುಸಿದು ಈ ಬಾವಿ ಪ್ರತ್ಯಕ್ಷವಾಗಿದೆ. ಈ ಬಾವಿ ಶತಮಾನಗಳ ಹಿಂದಿನದಾಗಿದ್ದು ಲೀ ಎಂಬವರು ಇದನ್ನು ನಿರ್ಮಿಸಿದ್ದರು. ಆ ಕಾರಣಕ್ಕಾಗಿ ಆ ಪ್ರದೇಶಕ್ಕೆ ಲೀವೆಲ್ ಎಂದು ಹೆಸರು ಬಂದಿತ್ತು. ಬಾವಿ ಬಾಯ್ದೆರೆದ ಕಾರಣ ಸಂಚಾರಕ್ಕೆ […]

4 ದಿನದ ಹಸುಳೆಯನ್ನು 2000 ರೂ.ಗಳಿಗೆ ಮಾರಿದ ತಂದೆ

Monday, August 29th, 2011
Baby/4 ದಿನಗಳ ಹಸುಳೆ

ಮಂಗಳೂರು : ಹಾಸನ ಕಲಂದರ್‌ ಯಾನೆ ರವಿ ಎಂಬಾತ 4 ದಿನಗಳ ಹಸುಳೆಯನ್ನು ಹಣದ ಆಸೆಗಾಗಿ ಬೋಳಾರದ ಅನ್ವರ್‌ ಎಂಬವನಿಗೆ ಮಾರಾಟ ಮಾಡಿದ್ದಾನೆ. ಅನ್ವರ್ ಎಂಬಾತ 2000 ರೂ.ಗಳಿಗೆ ಮಗುವನ್ನು ಖರೀದಿಸಿದ್ದ ಎಂದು ವಿಚಾರಣೆಯ ವೇಳೆ ಹೇಳಿದ್ದಾನೆ. ಮೋರ್ಗನ್ಸ್‌ ಗೇಟ್‌ನಲ್ಲಿ ಮಗು ಮಾರಾಟ ಯತ್ನ ಪ್ರಕರಣದಲ್ಲಿ ಶನಿವಾರ ರಾತ್ರಿ ಬಂಧಿತನಾಗಿರುವ ಅನ್ವರ್‌ ನನ್ನು ರವಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತನಿಗೆ ಸೆ. 8 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರ್ಥಿಕ ಸಂಕಷ್ಟದ ಕಾರಣ ಕಲಂದರ್‌ ಯಾನೆ […]